ಮಧ್ಯಂತರ ತಡೆ ನೀಡಲ್ಲ, ಜೋಡಣೆಯ ಕೊನೆಯ ದಿನಾಂಕವನ್ನು ಸ್ಪಷ್ಟಪಡಿಸಿ: ಸುಪ್ರೀಂ

Published : Nov 03, 2017, 06:26 PM ISTUpdated : Apr 11, 2018, 12:46 PM IST
ಮಧ್ಯಂತರ ತಡೆ ನೀಡಲ್ಲ, ಜೋಡಣೆಯ ಕೊನೆಯ ದಿನಾಂಕವನ್ನು ಸ್ಪಷ್ಟಪಡಿಸಿ: ಸುಪ್ರೀಂ

ಸಾರಾಂಶ

ನವೆಂಬರ್‌ ಕೊನೆಯ ವಾರದಲ್ಲಿ ಸಂವಿಧಾನ ಪೀಠವು ಆಧಾರ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿ ಪೀಠವೇ ಈ ವಿಷಯದಲ್ಲೂ ನಿರ್ಧಾರ ಕೈಗೊಳ್ಳುತ್ತದೆ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ.

ನವದೆಹಲಿ(ನ.03): ಮೊಬೈಲ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವುದಿಲ್ಲ ಎಂದಿರುವ ಸುಪ್ರೀಂ ಕೋರ್ಟ್ ಸಾರ್ವಜನಿಕರಿಗೆ ಬರುತ್ತಿರುವ ಕೊನೆಯ ದಿನಾಂಕದ ಬೆದರಿಕೆ ಸಂದೇಶಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಕೊನೆಯ ದಿನಾಂಕವನ್ನು ತಿಳಿಸುವಂತೆ ಸೂಚಿಸಿದೆ.

ಆಧಾರ್ ಪ್ರಕರಣದ ಬಗ್ಗೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನವೆಂಬರ್‌ ಕೊನೆಯ ವಾರದಲ್ಲಿ ಸಂವಿಧಾನ ಪೀಠವು ಆಧಾರ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿ ಪೀಠವೇ ಈ ವಿಷಯದಲ್ಲೂ ನಿರ್ಧಾರ ಕೈಗೊಳ್ಳುತ್ತದೆ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ.

ಬ್ಯಾಂಕ್ ಖಾತೆಯನ್ನು ಮೊಬೈಲ್ ಸಂಖ್ಯೆ'ಗೆ ಜೋಡಣೆ ಮಾಡುವುದಕ್ಕೆ ಡಿಸೆಂಬರ್ 31, 2017 ಹಾಗೂ ಫೆಬ್ರವರಿ 6, 2018 ಕೊನೆಯ ದಿನಾಂಕ ಎಂದು ಬ್ಯಾಂಕ್ ಹಾಗೂ ಟೆಲಿಕಾಂ ಸೇವಾ ಕಂಪನಿಗಳು ಸಂದೇಶ ಕಳಿಸುತ್ತಿವೆ. ಒಂದು ನಿರ್ಧಾರಿದ ಕೊನೆಯ ದಿನಾಂಕವನ್ನು ತಿಳಿಸುವಂತೆ ಕೋರ್ಟ್ ಸೂಚಿಸಿದೆ. ಕೆಲ ಸಾಮಾಜಿಕ ಸಂಘಟನೆಗಳು ಆದಾರ್'ಗೆ ಬ್ಯಾಂಕ್ ಹಾಗೂ ಮೊಬೈಲ್ ಸಂಖ್ಯೆಯನ್ನು ಜೋಡಿಸುವ ಕ್ರಮವು ಅಕ್ರಮ ಹಾಗೂ ಅಸಂವಿಧಾನಿಕ ಎಂದು ಸುಪ್ರಿಂ ಕೋರ್ಟ್'ಗೆ ಅರ್ಜಿ ಸಲ್ಲಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌