ಪ್ರಧಾನಿ ಮೋದಿ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಮಾರಕ: ಮೇವಾನಿ

Published : Jan 09, 2018, 06:54 PM ISTUpdated : Apr 11, 2018, 01:11 PM IST
ಪ್ರಧಾನಿ ಮೋದಿ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಮಾರಕ: ಮೇವಾನಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾರಕ ಎಂದು ನೂತನ ಶಾಸಕರಾಗಿ ಆಯ್ಕೆಯಾಗಿರವ ದಲಿತ ನಾಯಕ ಜಿಗ್ನೇಶ್ ಮೆವಾನಿ ರ್ಯಾಲಿಯಲ್ಲಿ ಹೇಳಿದ್ದಾರೆ.

ನವದೆಹಲಿ (ಜ.09): ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾರಕ ಎಂದು ನೂತನ ಶಾಸಕರಾಗಿ ಆಯ್ಕೆಯಾಗಿರವ ದಲಿತ ನಾಯಕ ಜಿಗ್ನೇಶ್ ಮೆವಾನಿ ರ್ಯಾಲಿಯಲ್ಲಿ ಹೇಳಿದ್ದಾರೆ.

ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್'ನಲ್ಲಿ ಮೇವಾನಿ ರ್ಯಾಲಿ ನಡೆಸಲು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮೇವಾನಿ, ಜನಪ್ರತಿನಿಧಿಯೊಬ್ಬನಿಗೆ ಈ ರೀತಿ ಅವಕಾಶ ನೀಡದೇ ಇರುವುದು ಗುಜರಾತ್ ಮಾಡೆಲ್ ಎಂದು ಟೀಕಿಸಿದ್ದಾರೆ.

ಗುಜರಾತ್ ಚುನಾವಣೆಯ ಬಳಿಕ ರಾಹುಲ್ ಹೇಳಿದ ಹೇಳಿಕೆಯನ್ನು ಆಧರಿಸುತ್ತಾ, ನಾನು ರಾಜಕೀಯ ಮೌಲ್ವವನ್ನು, ಸಾಂವಿಧಾನಿಕ ಮೌಲ್ಯವನ್ನು ಎತ್ತಿ ಹಿಡಿಯುತ್ತೇನೆ. ದೇಷ ರಾಜಕಾರಣದ ವಿರುದ್ಧ ನಿಲ್ಲುತ್ತೇನೆ ಎಂದು ಮೇವಾನಿ ಹೇಳಿದ್ದಾರೆ.

ರಾಜಕೀಯ ಒಗ್ಗಟ್ಟಿನಲ್ಲಿ, ರಾಜಕೀಯ ಪ್ರೀತಿಯಲ್ಲಿ ನಂಬಿಕೆ ಇದೆ. ನಮಗೆ ಲವ್ ಜಿಹಾದ್'ನಲ್ಲಿ ನಂಬಿಕೆ ಇಲ್ಲ. ಗುಜರಾತ್'ನಲ್ಲಿ ಬಿಜೆಪಿ ಅಹಂಕಾರವನ್ನು ಮುರಿದಿದ್ದಕ್ಕಾಗಿ ನನ್ನನ್ನು, ಅಲ್ಪೇಶ್ ಠಾಕೋರ್ ಹಾಗೂ ಹಾರ್ದಿಕ್ ಪಟೇಲ್;ರನ್ನು ಟಾರ್ಗೆಟ್ ಮಾಡಲಾಯಿತು. ನಮ್ಮ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಬೆದರಿಕೆ ಎದುರಾಗಿದೆ ಎಂದು ಮೇವಾನಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತ್ಯಸಂಸ್ಕಾರದ ವೇಳೆ ಅಚ್ಚರಿ, ಚಿತೆಯಿಂದ ಎದ್ದು ಬಂದು ಬರ್ತ್‌ಡೇ ಆಚರಿಸಿದ 103ರ ಹರೆಯದ ಅಜ್ಜಿ
ಬಿಗ್ ಬಾಸ್ ಪುಟುಗೋಸಿ ಶೋ, ಆಕ್ರೋಶಕ್ಕೆ ಗುರಿಯಾದ ಬೆಂಗಳೂರು ಕರವೇ ನಾಯಕನ ಹೇಳಿಕೆ