
ನವದೆಹಲಿ (ನ.12): ದಕ್ಷಿಣ ಚೀನಾ ಸಮುದ್ರದ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಚೀನಾ ಎಚ್ಚರಿಕೆ ನೀಡಿದ್ದರ ಹೊರತಾಗಿಯೂ, ಪ್ರಧಾನಿ ನರೇಂದ್ರ ಮೋದಿ- ಜಪಾನ್ ಪ್ರಧಾನಿ ಶಿಂಜೋ ಅಬೆ ದ್ವಿಪಕ್ಷೀಯ ಮಾತುಕತೆ ವೇಳೆಯಲ್ಲಿ ದಕ್ಷಿಣ ಚೀನಾ ಸಮುದ್ರದ ವಿಚಾರವಾಗಿ ಚರ್ಚಿಸಿದ್ದಾರೆ.
ಮಾತುಕತೆ ವೇಳೆ ದಕ್ಷಿಣ ಚೀನಾ ಸಮುದ್ರದ ವಿವಾದ ಬಗೆಹರಿಸಲು ವಿಶ್ವಸಂಸ್ಥೆಯ ನ್ಯಾಯಮಂಡಳಿ ಪ್ರಮುಖವಾದದ್ದು ಎಂಬ ಅಭಿಪ್ರಾಯವನ್ನು ಉಭಯ ನಾಯಕರೂ ವ್ಯಕ್ತಪಡಿಸಿದ್ದಾರೆ.
ಚೀನಾಗೆ ಆತಂಕ ಉಂಟುಮಾಡುವಂತಹ ಮತ್ತೊಂದು ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ, ಇರಾನ್ ನಲ್ಲಿ ಭಾರತದ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಚಾಬಹಾರ್ ಬಂದರು ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ.
ಚೀನಾ-ಪಾಕಿಸ್ತಾನದ ಸಹಭಾಗಿತ್ವದಲ್ಲಿ ಬಲೂಚಿಸ್ತಾನದಲ್ಲಿ ನಿರ್ಮಿಸಲಾಗಿರುವ ಗ್ವದಾರ್ ಬಂದರಿಗೆ ಪರ್ಯಾಯವಾಗಿ ಭಾರತ- ಇರಾನ್ ಸಹಭಾಗಿತ್ವದಲ್ಲಿ ಇರಾನ್ ನಲ್ಲಿ ಚಾಬಹಾರ್ ಬಂದರು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಭಾರತಕ್ಕೆ ಮಧ್ಯಪ್ರಾಚ್ಯ ರಾಷ್ಟ್ರಗಳೊಂದಿಗೆ ಸಂಪರ್ಕ ಸಾಧಿಸಲು ಈ ಬಂದರು ನೆರವಾಗಲಿದೆ. ಆದರೆ ಈಗ ಭಾರತ ಜಪಾನ್ ನೊಂದಿಗೆ ಚಬಹಾರ್ ಬಂದರು ಅಭಿವೃದ್ಧಿ ಬಗ್ಗೆ ಚರ್ಚಿಸಿರುವುದು ಚೀನಾಗೆ ಆತಂಕ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.