
ನವದೆಹಲಿ: ದೇಶ ಸೇವೆ ವೇಳೆ ಹುತಾತ್ಮರಾಗುವ ಯೋಧರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಜೊತೆಗೆ ಇದುವರೆಗೆ ಸೇನೆ, ಅರೆ ಸೇನಾ ಪಡೆ ಸಿಬ್ಬಂದಿಗೆ ಮಾತ್ರವೇ ಲಭ್ಯವಿದ್ದ ಯೋಜನೆಯನ್ನು ಇನ್ನು ಮುಂದೆ ರಾಜ್ಯಗಳ ಪೊಲೀಸರ ಕುಟುಂಬಕ್ಕೂ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಗುರುವಾರಷ್ಟೇ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಶುಕ್ರವಾರ ತನ್ನ ಮೊದಲ ಸಂಪುಟ ಸಭೆ ನಡೆಸಿದ್ದು, ಅದರಲ್ಲಿ ಮೊದಲ ಯೋಜನೆಯಾಗಿ ಇದನ್ನು ಅನುಮೋದಿಸಿದೆ.
ದೇಶ ಸೇವೆ ವೇಳೆ ಉಗ್ರರು ಅಥವಾ ನಕ್ಸಲರ ವಿರುದ್ಧ ಹೋರಾಡುವ ವೇಳೆ ಪ್ರಾಣ ಸಮರ್ಪಣೆ ಮಾಡುವ ಯೋಧರ ಮಕ್ಕಳಿಗೆ ರಾಷ್ಟ್ರೀಯ ರಕ್ಷಣಾ ನಿಧಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಗಂಡು ಮಕ್ಕಳಿಗೆ ಈ ವಿದ್ಯಾರ್ಥಿ ವೇತನ ಪ್ರಮಾಣವು ಮಾಸಿಕ 2000 ರು. ಇದ್ದು, ಅದನ್ನೀಗ 2500 ರು.ಗೆ ಹೆಚ್ಚಿಸಲಾಗಿದೆ. ಅದೇ ರೀತಿ ಹೆಣ್ಣು ಮಕ್ಕಳಿಗೆ ಇದ್ದ ವಿದ್ಯಾರ್ಥಿ ವೇತನ ಪ್ರಮಾಣವನ್ನು 2250ರು.ನಿಂದ 3000 ರು.ಗೆ ಹೆಚ್ಚಿಸಲಾಗಿದೆ.
ಪ್ರತಿ ವರ್ಷ ಸುಮಾರು 7750 ಮಕ್ಕಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.
ಪೊಲೀಸರಿಗೂ ವಿಸ್ತರಣೆ: ಇದುವರೆಗೆ ಕೇಂದ್ರೀಯ ಪಡೆಗಳ ಯೋಧರಿಗೆ ಮಾತ್ರ ಲಭ್ಯವಿದ್ದ ಯೋಜನೆಯನ್ನು ಇದೀಗ ರಾಜ್ಯ ಪೊಲೀಸರ ಕುಟುಂಬಕ್ಕೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ವಾರ್ಷಿಕ 500 ಕುಟುಂಬಗಳಿಗೆ ಈ ಯೋಜನೆ ಜಾರಿ ಮಿತಿಯನ್ನು ಸರ್ಕಾರ ಹಾಕಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.