ಹುತಾತ್ಮ ಯೋಧರು, ಪೊಲೀಸರ ಕುಟುಂಬಕ್ಕೆ ಕೇಂದ್ರ ಸರ್ಕಾರ ಗುಡ್ ನ್ಯೂಸ್

Published : Jun 01, 2019, 09:39 AM IST
ಹುತಾತ್ಮ ಯೋಧರು, ಪೊಲೀಸರ ಕುಟುಂಬಕ್ಕೆ ಕೇಂದ್ರ ಸರ್ಕಾರ ಗುಡ್ ನ್ಯೂಸ್

ಸಾರಾಂಶ

ಹುತಾತ್ಮರಾಗುವ ಯೋಧರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಇದರೊಂದಿಗೆ ರಾಜ್ಯ ಪೊಲೀಸ್ ಕುಟುಂಬಗಳಿಗೆ ಈ ಯೋಜನೆ ವಿಸ್ತರಿಸುತ್ತಿದೆ. 

ನವದೆಹಲಿ: ದೇಶ ಸೇವೆ ವೇಳೆ ಹುತಾತ್ಮರಾಗುವ ಯೋಧರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಜೊತೆಗೆ ಇದುವರೆಗೆ ಸೇನೆ, ಅರೆ ಸೇನಾ ಪಡೆ ಸಿಬ್ಬಂದಿಗೆ ಮಾತ್ರವೇ ಲಭ್ಯವಿದ್ದ ಯೋಜನೆಯನ್ನು ಇನ್ನು ಮುಂದೆ ರಾಜ್ಯಗಳ ಪೊಲೀಸರ ಕುಟುಂಬಕ್ಕೂ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಗುರುವಾರಷ್ಟೇ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಶುಕ್ರವಾರ ತನ್ನ ಮೊದಲ ಸಂಪುಟ ಸಭೆ ನಡೆಸಿದ್ದು, ಅದರಲ್ಲಿ ಮೊದಲ ಯೋಜನೆಯಾಗಿ ಇದನ್ನು ಅನುಮೋದಿಸಿದೆ.

ದೇಶ ಸೇವೆ ವೇಳೆ ಉಗ್ರರು ಅಥವಾ ನಕ್ಸಲರ ವಿರುದ್ಧ ಹೋರಾಡುವ ವೇಳೆ ಪ್ರಾಣ ಸಮರ್ಪಣೆ ಮಾಡುವ ಯೋಧರ ಮಕ್ಕಳಿಗೆ ರಾಷ್ಟ್ರೀಯ ರಕ್ಷಣಾ ನಿಧಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಗಂಡು ಮಕ್ಕಳಿಗೆ ಈ ವಿದ್ಯಾರ್ಥಿ ವೇತನ ಪ್ರಮಾಣವು ಮಾಸಿಕ 2000 ರು. ಇದ್ದು, ಅದನ್ನೀಗ 2500 ರು.ಗೆ ಹೆಚ್ಚಿಸಲಾಗಿದೆ. ಅದೇ ರೀತಿ ಹೆಣ್ಣು ಮಕ್ಕಳಿಗೆ ಇದ್ದ ವಿದ್ಯಾರ್ಥಿ ವೇತನ ಪ್ರಮಾಣವನ್ನು 2250ರು.ನಿಂದ 3000 ರು.ಗೆ ಹೆಚ್ಚಿಸಲಾಗಿದೆ.

ಪ್ರತಿ ವರ್ಷ ಸುಮಾರು 7750 ಮಕ್ಕಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

ಪೊಲೀಸರಿಗೂ ವಿಸ್ತರಣೆ:  ಇದುವರೆಗೆ ಕೇಂದ್ರೀಯ ಪಡೆಗಳ ಯೋಧರಿಗೆ ಮಾತ್ರ ಲಭ್ಯವಿದ್ದ ಯೋಜನೆಯನ್ನು ಇದೀಗ ರಾಜ್ಯ ಪೊಲೀಸರ ಕುಟುಂಬಕ್ಕೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ವಾರ್ಷಿಕ 500 ಕುಟುಂಬಗಳಿಗೆ ಈ ಯೋಜನೆ ಜಾರಿ ಮಿತಿಯನ್ನು ಸರ್ಕಾರ ಹಾಕಿಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ