
ನವದೆಹಲಿ, (ಜ.7): 2019ರ ಲೋಕಸಭಾ ಚುನಾವಣೆಗೂ ಮುನ್ನವೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಬಡವರಿಗೆ ಬಂಪರ್ ಉಡುಗೊರೆಯೊಂದನ್ನು ನೀಡಿದೆ. ಮೇಲ್ವರ್ಗದಲ್ಲಿರುವ ಆರ್ಥಿಕವಾಗಿ ಹಿಂದುಳಿದವರಿಗೂ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಜನವರಿ 8 - 9 ರಂದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?
ಫೇಸ್ಬುಕ್, ಟ್ವಿಟರ್ನಲ್ಲಿ ತರೆವಾರಿ ರಿಯಾಕ್ಷನ್ಗಳು ಬಂದಿವೆ. ಜಾತಿ ಆಧಾರಿತ ಮೀಸಲಾತಿಗಿಂತ ಇದೆ ಮೇಲು.. ನರೇಂದ್ರ ಮೋದಿ ಅವರಿಂದ ಇಂಥದ್ದೊಂದು ದಿಟ್ಟ ಕ್ರಮ ನಿರೀಕ್ಷೆ ಮಾಡಿದ್ದೆವು. ಮೋದಿ ಸರ್ಕಾರದಿಂದ ಐತಿಹಾಸಿಕ ನಡೆ. ಮೋದಿ ಸರ್ಕಾರದ ಈ ನಡೆಯಿಂದ 2019 ರ ಲೋಕಸಭಾ ಚುನಾವಣೆಯ ದಿಕ್ಕು ಬದಲಾಗಬಹುದು ಎಂಬ ಪ್ರತಿಕ್ರಿಯೆಗಳು ಬಂದಿವೆ.
ಮೇಲ್ಜಾತಿ ಬಡವರಿಗೂ ಉದ್ಯೋಗದಲ್ಲಿ ಮೀಸಲಾತಿ, ಮೋದಿ ಘೋಷಣೆ..!
ಮುಸ್ಲಿಮರು ಸಹ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು 8 ಲಕ್ಷ ರೂ. ಆದಾಯಕ್ಕಿಂತ ಕೆಳಗಿರುವವರು ಈ ವ್ಯಾಪ್ತಿಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಒಂದಿಷ್ಟು ಪ್ರತಿಕ್ರಿಯೆ ನೋಡಿಕೊಂಡು ಬನ್ನಿ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.