
ನವದೆಹಲಿ (ಮೇ.11): ಮೋದಿ ನೇತೃತ್ವದ ಸರ್ಕಾರದ ನೀತಿಗಳು ಅಲ್ಪಸಂಖ್ಯಾತ ಸಮುದಾಯಗಳನ್ನು ಮನವೊಲಿಕೆ ಮಾಡದೇ ನಂಬಿಕಸ್ಥ ವಾತಾವರಣವನ್ನು ಕಳೆದ 3 ವರ್ಷಗಳಲ್ಲಿ ಸೃಷ್ಟಿಸಿದೆ ಎಂದು ಕೇಂದ್ರ ಸಚಿವ ಮುಕ್ತರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ ಎನ್ನುವ ಆರೋಪ ಆಗಾಗ ಕೇಳಿ ಬರುತ್ತದೆ. ಇದನ್ನು ತಳ್ಳಿ ಹಾಕಿದ ನಕ್ವಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಲ್ಪಸಂಖ್ಯಾತರಿಗೆ ಶಿಕ್ಷಣ, ಕೌಶಲ್ಯಾಧಾರಿತ ತರಬೇತಿ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ಮುಸ್ಲೀಂಮರು,ಬೌದ್ಧರು, ಕ್ರೈಸ್ತರು, ಸಿಖ್ಖರು, ಪಾರ್ಸಿಗಳು, ಹಾಗೂ ಜೈನರನ್ನು ದೇಶದಲ್ಲಿ ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ. ಮನಮೋಹನ್ ಅಧಿಕಾರಾವಧಿಗೆ ಹೋಲಿಸಿದರೆ ಮೋದಿಯವರ ಸರ್ಕಾರ ಇವರಿಗೆ ಹೆಚ್ಚು ಶೈಕ್ಷಣಿಕ ಸೌಲಭ್ಯ ನೀಡಿದೆ ಎಂದು ನಕ್ವಿ ಹೇಳಿದ್ದಾರೆ.
ಅಲ್ಪಸಂಖ್ಯಾತರನ್ನು ಓಲೈಕೆ ಮಾಡದೇ ಅವರ ಶ್ರೇಯೋಭಿವೃದ್ಧಿಗಾಗಿ ಮೋದಿ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ. ಇದು ಅಲ್ಪಸಂಖ್ಯಾತರಲ್ಲಿ ಅಭಿವೃದ್ದಿ ಹಾಗೂ ನಂಬಿಕೆ ಮೂಡಿಸಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.