ರೈತರಿಗೆ ಗುಡ್ ನ್ಯೂಸ್ : ಮೋದಿ ಸರ್ಕಾರದಿಂದ ಸಿಗಲಿದೆ ನಗದು

Published : Jan 22, 2019, 12:44 PM IST
ರೈತರಿಗೆ ಗುಡ್ ನ್ಯೂಸ್ :  ಮೋದಿ ಸರ್ಕಾರದಿಂದ ಸಿಗಲಿದೆ ನಗದು

ಸಾರಾಂಶ

ಮೋದಿ ಸರ್ಕಾರ ದೇಶದ ರೈತರಿಗೆ ಗುಡ್ ನ್ಯೂಸ್ ಒಂದನ್ನು ನೀಡುತ್ತಿದೆ. ಲೋಕಸಭಾ ಚುನಾವಣೆಗೂ ಮೊದಲು ರೈತರ ಬ್ಯಾಂಕ್‌ ಖಾತೆಗೆ ವರ್ಷಕ್ಕೆ ಇಂತಿಷ್ಟುಎಂದು ನಗದು ವರ್ಗಾವಣೆ ಮಾಡುವ ಯೋಜನೆ ಜಾರಿಗೆ ಚಿಂತನೆ ನಡೆಸಿದೆ. 

ನವದೆಹಲಿ: ಆರ್ಥಿಕ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ನೆರವಾಗುವ ಸಲುವಾಗಿ ಲೋಕಸಭೆ ಚುನಾವಣೆಗೂ ಮೊದಲು ತೆಲಂಗಾಣದ ‘ರೈತ ಬಂಧು’ ಮಾದರಿ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ರೈತರ ಬ್ಯಾಂಕ್‌ ಖಾತೆಗೆ ವರ್ಷಕ್ಕೆ ಇಂತಿಷ್ಟುಎಂದು ನಗದು ವರ್ಗಾವಣೆ ಮಾಡುವ ಯೋಜನೆ ಇದಾಗಿದ್ದು, ಜಾರಿಗೆ ಬಂದರೆ ಕೃಷಿಕರಿಗೆ ಸಿಗುತ್ತಿರುವ ರಸಗೊಬ್ಬರದಂತಹ ಸಬ್ಸಿಡಿಗಳು ರದ್ದಾಗಲಿವೆ ಎಂದು ಹೇಳಲಾಗಿದೆ.

ರೈತರಿಗೆ ಹೇಗಿದ್ದರೂ ಆರ್ಥಿಕ ನೆರವು ನೀಡುವ ಸಲುವಾಗಿ ಯೋಜನೆ ಜಾರಿಗೆ ತರುತ್ತಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಮತ್ತಿತರ ಸಬ್ಸಿಡಿಯನ್ನು ನಿಲ್ಲಿಸಲು ಸರ್ಕಾರ ಆಲೋಚನೆಯಲ್ಲಿ ಮಗ್ನವಾಗಿದೆ ಎಂದು ಚರ್ಚೆಯಲ್ಲಿ ಭಾಗಿಯಾಗಿರುವ ಕೆಲ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಗದು ವರ್ಗಾವಣೆ ಯೋಜನೆ ವೆಚ್ಚವನ್ನು ವಾರ್ಷಿಕ 70 ಸಾವಿರ ಕೋಟಿ ರು.ಗೆ ಸೀಮಿತಗೊಳಿಸಲು ಸರ್ಕಾರ ಉದ್ದೇಶಿಸಿದೆ. ಮಾ.31ಕ್ಕೆ ಮುಕ್ತಾಯಗೊಳ್ಳುವ ಪ್ರಸಕ್ತ ಆರ್ಥಿಕ ವರ್ಷದಲ್ಲಿ 70 ಸಾವಿರ ಕೋಟಿ ರು. ಅನ್ನು ಸರ್ಕಾರ ಕೃಷಿ ಸಬ್ಸಿಡಿಗಾಗಿ ಮೀಸಲಿಟ್ಟಿದೆ. ಹೀಗಾಗಿ ಸರ್ಕಾರಕ್ಕೆ ಹೆಚ್ಚಿನ ಹೊರೆ ಬೀಳುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಆರೋಪ ಸಾಬೀತು : ಪಾಕ್‌ ಐಎಸ್‌ಐ ಮಾಜಿ ಮುಖ್ಯಸ್ಥ ಹಮೀದ್‌ಗೆ 14 ವರ್ಷ ಜೈಲು