
ನವದೆಹಲಿ (ಡಿ,29): ನೋಟು ಅಮಾನ್ಯ ಕ್ರಮದ ವಿರುದ್ಧ ದೇಶದಾದ್ಯಂತ ವ್ಯಕ್ತವಾಗುತ್ತಿರುವ ಟೀಕೆಗೆ ಪ್ರತ್ತ್ಯುತ್ತರ ನೀಡಲು ಸರ್ಕಾರವು ಬೃಹತ್ ಜಾಗೃತಿ ಅಭಿಯಾನ ನಡೆಸಲು ಉದ್ದೇಶಿಸಿದೆ ಎಂದು ವರದಿಯಾಗಿದೆ.
ಡಿ.31ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದೊಂದಿಗೆ ಅಭಿಯಾನವು ಆರಂಭವಾಗಲಿದೆ. ಕನಿಷ್ಠ 10 ಕಡೆ ಸಭೆ-ರ್ಯಾಲಿಗಳಲ್ಲಿ ಭಾಗವಹಿಸುವಂತೆ ಪ್ರತಿಯೊಬ್ಬ ಕೇಂದ್ರ ಸಚಿವರಿಗೆ ಸೂಚಿಸಲಾಗಿದೆ. ಜನಸಂಪರ್ಕ ಸಭೆಗಳನ್ನು ನಡೆಸುವ ಮೂಲಕ ನೋಟು ಅಮಾನ್ಯ ಕ್ರಮದ ಪ್ರಯೋಜನಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡುವಂತೆ ಸಚಿವರಿಗೆ ತಿಳಿಸಲಾಗಿದೆ.
ಆ ಹತ್ತು ಸ್ಥಳಗಳಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳು ಒಳಗೊಂಡಿರಬೇಕು, ಹಾಗೂ ಚುನಾವಣೆ ಎದುರಿಸಲಿರುವ ಪಂಜಾಬ್ ಮತ್ತು ಉತ್ತರ ಪ್ರದೇಶಗಳಲ್ಲಿ ಹೆಚ್ಚು ಒತ್ತು ನೀಡಬೇಕೆಂದು ಸಚಿವರಿಗೆ ಹೇಳಲಾಗಿದೆ ಎಂದು ಏಎನ್ಐ ವರದಿ ಮಾಡಿದೆ.
ನೋಟು ಅಮಾನ್ಯ ಕ್ರಮದ ಪ್ರಯೋಜನಗಳ ಕುರಿತು ಹಣಕಾಸು ಸಚಿವಾಲಯವು 60-ಪುಟಗಳ ಕಿರುಪುಸ್ತಕವನ್ನು ಸಚಿವರಿಗೆ ವಿತರಿಸಿದ್ದು, ಅವುಗಳನ್ನು ಜನರ ಬಳಿ ಕೊಂಡೊಯ್ಯುವಂತೆ ಸೂಚಿಸಲಾಗಿದೆ.
ಅಭಿಯಾನ ಸಂದರ್ಭದಲ್ಲಿ ರೇಡಿಯೋ, ಟೀವಿ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆಯೂ ಸಚಿವರಿಗೆ ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.