ಪ್ರಧಾನಿ ಮೋದಿಯಿಂದ ಕನ್ನಡಿಗರಿಗೆ ಅವಮಾನ: ಕನ್ನಡ ಪರ ಸಂಘಟನೆಗಳು

Published : Dec 24, 2016, 11:24 AM ISTUpdated : Apr 11, 2018, 12:35 PM IST
ಪ್ರಧಾನಿ ಮೋದಿಯಿಂದ ಕನ್ನಡಿಗರಿಗೆ ಅವಮಾನ: ಕನ್ನಡ ಪರ ಸಂಘಟನೆಗಳು

ಸಾರಾಂಶ

ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದ ಮುಖ್ಯಮಂತ್ರಿಗಳು ಬರುತ್ತಾರೆಂದರೆ ಗಂಟೆಗಟ್ಟಲೆ ಕಾದಿರುತ್ತಾರೆ, ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಡಿ.24): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡುವ ಅವಕಾಶ ನೀಡದಿರುವುನ್ನು ಖಂಡಿಸಿರುವ ಕನ್ನಡ ಪರ ಸಂಘಟನೆಗಳು, ಇದು ಕನ್ನಡಿಗರಿಗೆ ಮಾಡುತ್ತಿರುವ ಅವಮಾನ ಎಂದು ಅಕ್ರೋಶ ವ್ಯಕ್ಟಪಡಿಸಿದ್ದಾರೆ.

ಕಳಸಾ ಬಂಡೂರಿ, ಮಹಾದಾಯಿ, ಬರ ಪರಿಸ್ಥಿತಿ ಬಗ್ಗೆ ಮಾತನಾಡಬೇಕು, ಆದರೆ ಪ್ರಧಾನಿ ಮೋದಿ ಅದಕ್ಕೆ ಅವಕಾಶ ನೀಡುತ್ತಿಲ್ಲ, ಮೊದಲನೆ ಬಾರಿ ಈ ರೀತಿಯಾಗುತ್ತಿದೆ, ಇದರಿಂದ ಕನ್ನಡಿಗರಿಗೆ ಅಪಮಾನವಾಗುತ್ತಿದೆ ಎಂದು ಕನ್ನಡ ಒಕ್ಕೂಟದ ಮುಖಂಡರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದ ಮುಖ್ಯಮಂತ್ರಿಗಳು ಬರುತ್ತಾರೆಂದರೆ ಗಂಟೆಗಟ್ಟಲೆ ಕಾದಿರುತ್ತಾರೆ, ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳಸ ಬಂಡೂರಿ ವಿಚಾರದಲ್ಲಿ ಮೋದಿ ಮಧ್ಯವಹಿಸಬೇಕು ಹಾಗೂ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಶಾಶ್ವತ ಕುಡಿಯುವ ನೀರಿನ ಬಗ್ಗೆ ಸರ್ಕಾರ ತೀರ್ಮಾನ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜನವರಿಯಲ್ಲಿ ಪ್ರಧಾನಿ ಭೇಟಿಗೆ ಸಮಯ ನೀಡಿಲ್ಲವೆಂದಾದಲ್ಲಿ ಕರ್ನಾಟಕ ಬಂದ್ ಮಾಡುವ ಬಗ್ಗೆ ಅವರು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೂಪಾಯಿ ಕುಸಿದರೂ ಪ್ರಗತಿಯತ್ತ ಭಾರತ: ನಿಜಕ್ಕೂ ಏನಾಗುತ್ತಿದೆ?‌
87 ವರ್ಷದ ಪ್ರಸಿದ್ಧ ಪೇಂಟರ್ ಮಗುವಿಗೆ ತಾಯಿಯಾದ 37 ವರ್ಷದ ಪತ್ನಿ, ಉಳಿದ ಮಕ್ಕಳೊಂದಿಗೆ ಬಂಧವೇ ಕಟ್