ಪ್ರಧಾನಿ ಮೋದಿಯಿಂದ ರೈತರ ಕಡೆಗಣನೆ: ರಾಹುಲ್ ಗಾಂಧಿ

Published : Feb 06, 2017, 01:03 PM ISTUpdated : Apr 11, 2018, 12:55 PM IST
ಪ್ರಧಾನಿ ಮೋದಿಯಿಂದ ರೈತರ ಕಡೆಗಣನೆ: ರಾಹುಲ್ ಗಾಂಧಿ

ಸಾರಾಂಶ

50 ಮಂದಿ ಉದ್ಯಮಿಗಳ 110000 ಕೋಟಿ ರೂ. ಸಾಲವನ್ನು ಮೋದಿ ಮನ್ನಾ ಮಾಡಿದ್ದಾರೆ. ರೈತರ ಸಾಲ ಮನ್ನಾ ಮಾಡಲು ನಾನು ಮಾನವಿ ಮಾಡಿದ್ದೆ, ಆದರೆ ಅದರ ಬಗ್ಗೆ ಅವರು ಮೌನ ಪಾಲಿಸಿದ್ದಾರೆ.  ಅವರು ಶ್ರೀಮಂತರಿಗೆ ನೆರವು ನೀಡುತ್ತಾರೆಯೇ ಹೊರತು ದೇಶದ ಬಡಜನರಿಗಲ್ಲವೆಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮಥುರಾ (ಫೆ.06): ಕೇಂದ್ರ ಸರ್ಕಾರದ  ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾದ್ಯಕ್ಷ ರಾಹುಲ್ ಗಾಂಧಿ, ಪ್ರದಾನಿ ಮೋದಿಯವರನ್ನು ರೈತ-ವಿರೋಧಿ ಎಂದು ಬಣ್ಣಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀಡಿರುವ ಆಶ್ವಾಸನೆಗಳನ್ನು ಈಡೇರಿಸದೇ ಪ್ರಧಾನಿ  ಮೋದಿ ಕೇವಲ ಶ್ರೀಮಂತ ಉದ್ಯಮಿಗಳಿಗೆ ನೆರವನ್ನು ನೀಡುತ್ತಿದ್ದಾರೆ ಎಂದು ಮಥುರಾದಲ್ಲಿ ಚುನಾವಣಾ ಸಭೆಯನ್ನುದ್ದೇಶಿ ಮಾತನಾಡುತ್ತಾ ರಾಹುಲ್ ಗಾಂಧಿ ಹೇಳಿದ್ದಾರೆ.

50 ಮಂದಿ ಉದ್ಯಮಿಗಳ 110000 ಕೋಟಿ ರೂ. ಸಾಲವನ್ನು ಮೋದಿ ಮನ್ನಾ ಮಾಡಿದ್ದಾರೆ. ರೈತರ ಸಾಲ ಮನ್ನಾ ಮಾಡಲು ನಾನು ಮಾನವಿ ಮಾಡಿದ್ದೆ, ಆದರೆ ಅದರ ಬಗ್ಗೆ ಅವರು ಮೌನ ಪಾಲಿಸಿದ್ದಾರೆ.  ಅವರು ಶ್ರೀಮಂತರಿಗೆ ನೆರವು ನೀಡುತ್ತಾರೆಯೇ ಹೊರತು ದೇಶದ ಬಡಜನರಿಗಲ್ಲವೆಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಮೋದಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದರು. ಆದರೆ ಇಲ್ಲಿ ಯಾವುದೇ ಉದ್ಯೋಗವಕಾಶಗಳನ್ನು ಅವರು ಸೃಷ್ಟಿಸಿಲ್ಲವೆಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಫೆ.11 ರಿಂದ ಉತ್ತರ ಪ್ರದೇಶ ವಿಧಾನ ಸಭೆಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ