
ಲಖನೌ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಬರೋಬ್ಬರಿ 60 ಸಾವಿರ ಕೋಟಿ ರು. ವೆಚ್ಚದ 81 ಯೋಜನೆಗಳಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಅಂದರೆ 80 ಕೋಟಿ ಕ್ಷೇತ್ರಗಳನ್ನು ಹೊಂದಿರುವ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ಉತ್ತರಪ್ರದೇಶದಲ್ಲಿ ಮೋದಿ ಅವರು ಬೃಹತ್ ಮೊತ್ತದ ಯೋಜನೆ ಗಳಿಗೆ ಚಾಲನೆ ನೀಡಿರುವುದು ಮಹತ್ವದ್ದಾಗಿದೆ.
ಅಲ್ಲದೆ ಹಿಂದುಳಿದಿರುವ ಉತ್ತರಪ್ರದೇಶದಲ್ಲಿ ಕೈಗಾರಿಕೀಕರಣಕ್ಕೆ ಒತ್ತು ನೀಡಿದಂತಾಗಿದೆ. ಈ ಯೋಜನೆಗಳಿಂದ 2 ಲಕ್ಷ ಉದ್ಯೋಗ ಸೃಷ್ಟಿ ಯಾಗುವ ನಿರೀಕ್ಷೆ ಇದೆ. ಭೂಮಿಪೂಜೆ ಕಾರ್ಯಕ್ರಮದಲ್ಲಿ ಆದಿತ್ಯ ಬಿರ್ಲಾ ಸಮೂಹದ ಕುಮಾರ ಮಂಗಳಂ ಬಿರ್ಲಾ, ಅದಾನಿ ಸಮೂಹದ ಗೌತಮ್ ಅದಾನಿ, ಎಸ್ಸೆಲ್ ಗ್ರೂಪ್ನ ಸುಭಾಷ್ ಚಂದ್ರ, ಐಟಿಸಿ ಕಂಪನಿ ವ್ಯವಸ್ಥಾಪಕ ನಿರ್ದೆಶಕ ಸಂಜೀವ್ ಪುರಿ ಸೇರಿದಂತೆ 80 ಖ್ಯಾತನಾಮ ಉದ್ಯಮಿಗಳು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಮೋದಿ ಅವರು, ಇಂದಿನ ಕಾರ್ಯಕ್ರಮವನ್ನು ಗ್ರೌಂಡ್ ಬ್ರೇಕಿಂಗ್ (ಶಂಕುಸ್ಥಾಪನೆ) ಕಾರ್ಯಕ್ರಮ ಎಂದು ಕೆಲವರು ಕರೆಯುತ್ತಾರೆ.
ಆದರೆ ಇದು ರೆಕಾರ್ಡ್ ಬ್ರೇಕಿಂಗ್ (ದಾಖಲೆಯ) ಕಾರ್ಯಕ್ರಮ. ನಾನೂ ದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದೆ. 60 ಸಾವಿರ ಕೋಟಿ ರು. ಹೂಡಿಕೆ ಅತಿದೊಡ್ಡ ಸಾಧನೆ. ಹೀಗಾಗಿ ಅಧಿಕಾರಿಗಳಿಗೆ ಧನ್ಯವಾದ ಹೇಳುವೆ ಎಂದು ತಿಳಿಸಿದರು. ಫೆಬ್ರವರಿಯಲ್ಲಷ್ಟೇ ಉತ್ತರಪ್ರದೇಶದಲ್ಲಿ ಹೂಡಿಕೆದಾರರ ಸಮಾವೇಶ ನಡೆದಿತ್ತು.
ಪ್ರತಿಪಕ್ಷಗಳು ಕೈಗಾರಿಕೋದ್ಯಮಿಗಳನ್ನು ಕಳ್ಳರು ಹಾಗೂ ಲೂಟಿಕೋರರು ಎಂದು ಕರೆಯುತ್ತಿವೆ. ಆದರೆ, ರೈತರು, ಬ್ಯಾಂಕರ್ಗಳು, ಸರ್ಕಾರಿ ನೌಕರರು, ಕಾರ್ಮಿಕ ರ ರೀತಿಯಲ್ಲೇ ಅವರು ಕೂಡ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ನಿಮ್ಮ ಉದ್ದೇಶ ಸ್ಪಷ್ಟ ಹಾಗೂ ಒಳ್ಳೆಯದಾಗಿದ್ದರೆ ಯಾರ ಜತೆಗೆ ನಿಂತರೂ ನಿಮ್ಮ ಮೇಲೆ ಕಲೆ ಮೆತ್ತಲಾಗದು. ಗಾಂಧೀಜಿ ಅವರ ಉದ್ದೇಶ ಶುದ್ಧವಾಗಿದ್ದ ಕಾರಣಕ್ಕೇ ಅವರು ಬಿರ್ಲಾ ಕುಟುಂಬದ ಜತೆ ಉಳಿದುಕೊಳ್ಳಲು ಹಿಂಜರಿಕೆ ತೋರಿರಲಿಲ್ಲ. ನನಗೂ ಉದ್ಯಮಿಗಳ ಜತೆ ನಿಲ್ಲಲು ನನಗೆ ಹೆದರಿಕೆ ಇಲ್ಲ. ನನ್ನ ಉದ್ದೇಶ ಸ್ಪಷ್ಟವಾಗಿದೆ.
ನರೇಂದ್ರ ಮೋದಿ ಪ್ರಧಾನಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.