ಕರ್ನಾಟಕದ ಇಬ್ಬರು ಕ್ರಿಕೆಟಿಗರನ್ನು ಕೊಂಡಾಡಿದ ಮೋದಿ

Published : Dec 25, 2016, 06:21 AM ISTUpdated : Apr 11, 2018, 12:43 PM IST
ಕರ್ನಾಟಕದ ಇಬ್ಬರು ಕ್ರಿಕೆಟಿಗರನ್ನು ಕೊಂಡಾಡಿದ ಮೋದಿ

ಸಾರಾಂಶ

ಮನ್ ಕೀ ಬಾತ್'ನಲ್ಲಿ ಮಾತನಾಡಿದ ಪ್ರಧಾನಿ ಅವರು, ಕರುಣ್ ನಾಯರ್ ಮತ್ತು ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಸಾಧನೆಯನ್ನಂತೂ ಮನದುಂಬಿ ಪ್ರಶಂಸಿದರು.

ನವದೆಹಲಿ(ಡಿ. 25): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯನ್ನು ಗೆದ್ದ ಟೀಮ್ ಇಂಡಿಯಾವನ್ನು ಪ್ರಧಾನಿ ಮೋದಿ ಕೊಂಡಾಡಿದರು. ಮನ್ ಕೀ ಬಾತ್'ನಲ್ಲಿ ಮಾತನಾಡಿದ ಪ್ರಧಾನಿ ಅವರು, ಕರುಣ್ ನಾಯರ್ ಮತ್ತು ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಸಾಧನೆಯನ್ನಂತೂ ಮನದುಂಬಿ ಪ್ರಶಂಸಿದರು. ಆರ್.ಅಶ್ವಿನ್ ಅವರ ಬೌಲಿಂಗ್ ಮತ್ತು ವಿರಾಟ್ ಕೊಹ್ಲಿಯವರ ನಾಯಕತ್ವವನ್ನೂ ಪ್ರಧಾನಿ ಮೋದಿ ಶ್ಲಾಘಿಸಿದರು.

ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಭಾರತ 4-0 ಅಂತರದಿಂದ ಜಯಿಸಿದೆ. ಕರುಣ್ ನಾಯರ್ ತ್ರಿಶತಕ ಸಿಡಿಸಿದರೆ, ಕೆಎಲ್ ರಾಹುಲ್ ಕೇವಲ 1 ರನ್'ನಿಂದ ದ್ವಿಶತಕವಂಚಿತರಾಗಿದ್ದರು. ಇಂಗ್ಲೆಂಡ್ ವಿರುದ್ಧದ ಇಡೀ ಸರಣಿಯಲ್ಲಿ ಆರ್.ಅಶ್ವಿನ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಅಶ್ವಿನ್ ಅವರಿಗೆ ವರ್ಷದ ಐಸಿಸಿ ಕ್ರಿಕೆಟಿಗ ಹಾಗೂ ವರ್ಷದ ಟೆಸ್ಟ್ ಕ್ರಿಕೆಟಿಗ ಎಂಬ ಪ್ರಶಸ್ತಿಗಳೂ ಬಂದಿವೆ.

ಇದೇ ವೇಳೆ, 15 ವರ್ಷಗಳ ಬಳಿಕ ಕಿರಿಯರ ವಿಶ್ವ ಕಪ್ ಜಯಿಸಿದ ಭಾರತೀಯ ಹಾಕಿ ಆಟಗಾರರ ಸಾಧನೆಯನ್ನೂ ಪ್ರಧಾನಿ ಮೋದಿ ಶ್ಲಾಘಿಸಿದ್ದು ಗಮನಾರ್ಹ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!