ರೈಲ್ವೆ ಸೇತುವೆ: ಪುತ್ತೂರು ಬಾಲಕಿ ಬರೆದ ಪತ್ರಕ್ಕೆ ಮೋದಿ ಸ್ಪಂದನೆ

Published : Jun 15, 2017, 02:12 PM ISTUpdated : Apr 11, 2018, 01:01 PM IST
ರೈಲ್ವೆ ಸೇತುವೆ: ಪುತ್ತೂರು ಬಾಲಕಿ ಬರೆದ ಪತ್ರಕ್ಕೆ ಮೋದಿ ಸ್ಪಂದನೆ

ಸಾರಾಂಶ

ತನ್ನೂರಿನ ರಸ್ತೆಯಲ್ಲಿದ್ದ ರೈಲ್ವೆ ಗೇಟ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆ ಬಗ್ಗೆ ಆರನೇ ತರಗತಿ ಬಾಲಕಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮೇಲ್ಸೇತುವೆ ನಿರ್ಮಿಸಲು ಮನವಿ ಮಾಡಿದ್ದು, ಇದಕ್ಕೆ ಸ್ಪಂದಿಸಿರುವ ಪ್ರಧಾನಿ ಕಚೇರಿ, ಕ್ರಮಕ್ಕಾಗಿ ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದೆ.

ಮೂಲ್ಕಿ: ತನ್ನೂರಿನ ರಸ್ತೆಯಲ್ಲಿದ್ದ ರೈಲ್ವೆ ಗೇಟ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆ ಬಗ್ಗೆ ಆರನೇ ತರಗತಿ ಬಾಲಕಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮೇಲ್ಸೇತುವೆ ನಿರ್ಮಿಸಲು ಮನವಿ ಮಾಡಿದ್ದು, ಇದಕ್ಕೆ ಸ್ಪಂದಿಸಿರುವ ಪ್ರಧಾನಿ ಕಚೇರಿ, ಕ್ರಮಕ್ಕಾಗಿ ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದೆ.

ಮೂಲತಃ ಪುತ್ತೂರಿನ, ಕಿನ್ನಿಗೋಳಿ ಸಮೀಪದ ಪದ್ಮನೂರಿನ ನಿವಾಸಿಗಳಾದ ರಮೇಶ್‌ ಕುಲಾಲ್‌-ಕುಸುಮಾ ದಂಪತಿ ಪುತ್ರಿ, ಮೂಲ್ಕಿ ಸಮೀಪದ ಶಾರದಾ ಆಂಗ್ಲ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ‘ಧೃತಿ' ಪತ್ರ ಬರೆದ ಬಾಲಕಿ.
ಕಿನ್ನಿಗೋಳಿ-ಮಂಗಳೂರು ಮುಖ್ಯ ರಸ್ತೆಯ ಹಳೆಯಂಗಡಿಯ ಇಂದಿರಾನಗರ ಬಳಿ ರೈಲ್ವೆಗೇಟ್‌ ನಿರ್ಮಿಸಲಾಗಿದ್ದು, ಪದೇ ಪದೇ ಗೇಟ್‌ ಹಾಕುತ್ತಿದ್ದರಿಂದ ಸಾಕಷ್ಟುತೊಂದರೆಯಾಗಿತ್ತು. ಈ ರೈಲ್ವೆ ಗೇಟ್‌ ಹಾಕಿದ್ದರಿಂದ ಆ್ಯಂಬುಲೆನ್ಸ್‌ನಲ್ಲಿದ್ದ ಗರ್ಭಿಣಿಯೊಬ್ಬರಿಗೆ ತೊಂದರೆಯಾಗಿದ್ದನ್ನು ಕಂಡಿದ್ದ ಬಾಲಕಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಹಸ್ತಾಕ್ಷರದಲ್ಲೇ 3 ಪುಟಗಳ ಪತ್ರ ಬರೆದಿದ್ದಳು.

ಪ್ರಧಾನಿ ಕಚೇರಿಯಿಂದ ಸೂಚನೆ ಬಂದೊಡನೆ ರೈಲ್ವೆ ಅಧಿಕಾರಿಗಳು ಧೃತಿ ತಂದೆ ರಮೇಶ್‌ ಕುಲಾಲ್‌ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದು ಈ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಿರುವ ಬಗ್ಗೆ ಮರು ಪತ್ರವನ್ನೂ ಬರೆದಿದ್ದಾರೆ. ಹಳೆಯಂಗಡಿ ಇಂದಿರಾನಗರ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಯೋಜನೆ ಸಿದ್ಧವಾಗಿದೆ. ಇದಕ್ಕೆ ರೂ. 4.56 ಕೋಟಿ ವೆಚ್ಚ ತಗುಲಲಿದೆ. ಯೋಜನೆಗೆ ಸಹಕರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೂ ಪತ್ರ ಬರೆಯುವುದಾಗಿ ತಿಳಿಸಿದ್ದಾಳೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ