ದೇಶದ 1 ಕೋಟಿ ರೈತರಿಗೆ ಮೋದಿ ಹಣ!

Published : Feb 15, 2019, 10:05 AM IST
ದೇಶದ 1 ಕೋಟಿ  ರೈತರಿಗೆ  ಮೋದಿ ಹಣ!

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ರೈತರಿಗೂ 2000 ರು.ನಂತೆ ಮೊದಲ ಕಂತಿನಲ್ಲಿ 1 ಕೋಟಿ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆ ಮಾಡಲಿದ್ದಾರೆ 

ನವದೆಹಲಿ: ದೇಶದ ರೈತರಿಗೆ ಸಹಾಯ ಧನ ನೀಡುವ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ರೈತರಿಗೂ 2000 ರು.ನಂತೆ ಮೊದಲ ಕಂತಿನಲ್ಲಿ 1 ಕೋಟಿ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆ ಮಾಡಲಿದ್ದಾರೆ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 75 ಸಾವಿರ ಕೋಟಿ ರು. ಮೌಲ್ಯದ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಫೆ.24ರಂದು ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ಗುರುವಾರ ಮಾತನಾಡಿದ ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, ‘ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಫೆ.24ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಖಾತೆಗಳಿಗೆ ಹಣ ಜಮೆ ಮಾಡುವ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದಿನ ದಿನವೇ 1 ಕೋಟಿಗಿಂತ ಹೆಚ್ಚಿನ ಫಲಾನುಭವಿಗಳ ಖಾತೆಗಳಿಗೆ ಮೋದಿ ಅವರು ಮೊದಲ ಕಂತಿನ ಹಣ ಜಮೆ ಮಾಡಲಿದ್ದಾರೆ. ಅಲ್ಲದೆ, 2ನೇ ಕಂತಿನ ಹಣವನ್ನು ಏ.1ರಿಂದ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ,’ ಎಂದು ಹೇಳಿದ್ದಾರೆ.

ಇನ್ನು ಅರಣ್ಯ ಪ್ರದೇಶದಲ್ಲಿ ಕೃಷಿ ಮಾಡುವ ಹಕ್ಕು ಹೊಂದಿರುವ ಬುಡಕಟ್ಟು ಜನಾಂಗದವರೂ ಸಹ ಈ ಯೋಜನೆಯ ಫಲಾನುಭವಿಯಾಗಲು ಅರ್ಹರಿರುತ್ತಾರೆ. ಗುರುವಾರದಿಂದಲೇ ಈ ಯೋಜನೆಗೆ ಅರ್ಹವಿರುವ ರೈತರ ಮಾಹಿತಿಗಳನ್ನು ಎಲ್ಲ ರಾಜ್ಯಗಳು ಪಿಎಂ-ಕಿಸಾನ್‌ ಪೋರ್ಟಲ್‌ಗೆ ದಾಖಲೆಗಳನ್ನು ಸಲ್ಲಿಸುತ್ತಿವೆ. ಈಗಾಗಲೇ 12ಕ್ಕೂ ಹೆಚ್ಚು ರಾಜ್ಯಗಳು ಈ ಕುರಿತಾದ ಶೇ.90ರಷ್ಟುಕೆಲಸವನ್ನು ಪೂರ್ಣಗೊಳಿಸಿವೆ ಎಂದು ಅವರು ತಿಳಿಸಿದರು.

2019-20ನೇ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ದೇಶದ ಸಣ್ಣ ಮತ್ತು ಮಧ್ಯಮ ವರ್ಗದ ಪ್ರತಿಯೊಬ್ಬ ರೈತರಿಗೂ ವಾರ್ಷಿಕ 6000 ರು. ಸಹಾಯ ಧನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!