ಮೋದಿಕೇರ್‌’ ಯೋಜನೆಯಿಂದ ಪಶ್ಚಿಮ ಬಂಗಾಳ ಹೊರಕ್ಕೆ

Published : Feb 15, 2018, 01:11 PM ISTUpdated : Apr 11, 2018, 12:42 PM IST
ಮೋದಿಕೇರ್‌’ ಯೋಜನೆಯಿಂದ ಪಶ್ಚಿಮ ಬಂಗಾಳ ಹೊರಕ್ಕೆ

ಸಾರಾಂಶ

ಮೋದಿ ಕೇರ್‌ ಎಂದೇ ಬಣ್ಣಿತ ಕೇಂದ್ರ ಸರ್ಕಾರದ ಉಚಿತ ಆರೋಗ್ಯ ವಿಮಾ ಯೋಜನೆಯಿಂದ ಹೊರಗುಳಿಯಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ.

ಕೊಲ್ಕತಾ: ಮೋದಿ ಕೇರ್‌ ಎಂದೇ ಬಣ್ಣಿತ ಕೇಂದ್ರ ಸರ್ಕಾರದ ಉಚಿತ ಆರೋಗ್ಯ ವಿಮಾ ಯೋಜನೆಯಿಂದ ಹೊರಗುಳಿಯಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ.

ಈಗಾಗಲೇ ನಮ್ಮ ರಾಜ್ಯದಲ್ಲಿ ‘ಸ್ವಾಸ್ಥ್ಯ ಸಾಥಿ ಯೋಜನೆ’ ಮೂಲಕ 50 ಲಕ್ಷ ಜನರಿಗೆ ಉಚಿತ ಆರೋಗ್ಯ ಸೇವೆ ನೀಡಲಾಗುತ್ತಿದೆ. ಹೀಗಿರುವಾಗ ರಾಜ್ಯದ ಜನರಿಗೆ ಹೊಸದೊಂದು ವಿಮಾ ಯೋಜನೆಯ ಅಗತ್ಯವಿಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಈ ಮೂಲಕ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಿಂದ ಹಿಂದಕ್ಕೆ ಸರಿಯಲು ಮುಂದಾದ ಪ್ರಥಮ ರಾಜ್ಯವಾಗಿ ಪಶ್ಚಿಮ ಬಂಗಾಳ ಗುರುತಿಸಲ್ಪಟ್ಟಿದೆ. 10 ಕೋಟಿ ಕುಟುಂಬಗಳ ಜನರಿಗೆ ತಲಾ 5 ಲಕ್ಷ ರು. ಆರೋಗ್ಯ ವಿಮೆ ಯೋಜನೆಯನ್ನು ಕೇಂದ್ರ ಸರ್ಕಾರ ಕಳೆದ ಬಜೆಟ್‌ನಲ್ಲಿ ಪ್ರಕಟಿಸಿತ್ತು. ಈ ಯೋಜನೆಯಲ್ಲಿ ರಾಜ್ಯಗಳಿಂದ ಶೇ.40ರಷ್ಟುವಿಮಾ ಮೊತ್ತ ಸಂಗ್ರಹಿಸುವ ಗುರಿಯನ್ನು ಕೇಂದ್ರ ಹೊಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8 ಕೋಟಿ ಮೌಲ್ಯದ ಆನ್‌ಲೈನ್ ವಂಚನೆ ಬಗ್ಗೆ ಡೆತ್‌ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಾಜಿ ಐಜಿ
ಬರೋಬ್ಬರಿ 6 ವರ್ಷಗಳ ಬಳಿಕ ಸಂಚಾರಕ್ಕೆ ಮುಕ್ತವಾಗಲಿದೆ ಬೆಂಗಳೂರಿನ ಕಾಮರಾಜ್‌ ರಸ್ತೆ!