ನಲಪಾಡ್'ಗೆ ನಾಳೆ ನಿರ್ಣಾಯಕ ದಿನ

Published : May 29, 2018, 08:48 PM IST
ನಲಪಾಡ್'ಗೆ ನಾಳೆ ನಿರ್ಣಾಯಕ ದಿನ

ಸಾರಾಂಶ

ತನಿಖೆ ಮುಕ್ತಾಯವಾಗಿದ್ದು, ಸಾಕ್ಷಿಗಳಿಗೆ ಯಾವುದೇ ಪ್ರಭಾವ ಬೀರುವ ಮಾತೇ ಇಲ್ಲ. ಹೀಗಾಗಿ ಜಾಮೀನು ನೀಡುವಂತೆ ನಲಪಾಡ್ ಪರ ವಕೀಲರು ಮನವಿ ಮಾಡಿದ್ದಾರೆ. ಆದರೆ, ಎಸ್ಪಿಪಿ ಶ್ಯಾಮಸುಂದರ್, ವಿಶೇಷ ಪ್ರಕರಣವಾಗಿದ್ದು, ಅಮಾನಿಯವಾಗಿ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು(ಮೇ.29): ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಮೊಹಮದ್ ನಲಪಾಡ್ ಹ್ಯಾರಿಸ್ ಗೆ ನಾಳೆ ನಿರ್ಣಾಯಕ ದಿನ.
ಮಾರಾಣಾಂತಿಕ ಹಲ್ಲೆ ಆರೋಪದಲ್ಲಿ ಬರೋಬ್ಬರಿ 100 ದಿನ ಜೈಲು ವಾಸ ಅನುಭವಿಸಿ ಜೈಲಿನಿಂದ ಹೊರ ಬರುತ್ತಾನಾ ಎನ್ನುವುದು ನಾಳೆ ನಿರ್ಧಾರವಾಗಲಿದೆ. ಆರೋಪ ಪಟ್ಟಿ ಸಲ್ಲಿಕೆಯಾದ ನಂತರ ಎರಡನೇ ಸುತ್ತಿನಲ್ಲಿ ಜಾಮೀನು ಪಡೆಯುವ ಪ್ರಯತ್ನ ಮುಂದುವರೆದಿದೆ. ಜಾಮೀನು ಅರ್ಜಿ ಸಂಬಂಧ ಸೆಷನ್ಸ್ ಕೋರ್ಟ್ನಲ್ಲಿ ವಾದ ಪ್ರತಿವಾದ ಮುಕ್ತಾಯವಾಗಿದ್ದು ಇಂದು ಅಂತಿಮ ಆದೇಶ ಹೊರಬೀಳಲಿದೆ. 
ತನಿಖೆ ಮುಕ್ತಾಯವಾಗಿದ್ದು, ಸಾಕ್ಷಿಗಳಿಗೆ ಯಾವುದೇ ಪ್ರಭಾವ ಬೀರುವ ಮಾತೇ ಇಲ್ಲ. ಹೀಗಾಗಿ ಜಾಮೀನು ನೀಡುವಂತೆ ನಲಪಾಡ್ ಪರ ವಕೀಲರು ಮನವಿ ಮಾಡಿದ್ದಾರೆ. ಆದರೆ, ಎಸ್ಪಿಪಿ ಶ್ಯಾಮಸುಂದರ್, ವಿಶೇಷ ಪ್ರಕರಣವಾಗಿದ್ದು, ಅಮಾನಿಯವಾಗಿ ಹಲ್ಲೆ ನಡೆಸಿದ್ದಾರೆ. ಅಧಿಕಾರದ ಮದದಿಂದ ವಿಕೃತಿ ಮೆರೆದಿದ್ದು, ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ. ವಾದ ಪ್ರತಿವಾದ ಆಲಿಸಿರುವ ಕೋರ್ಟ್ ನಾಳೆ ನೀಡಲಿರುವ ಆದೇಶ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು