
ನವದೆಹಲಿ (ಜ.14): ಆರ್ ಎಸ್ ಎಸ್ ಯಾರ ವಿರುದ್ಧವೂ ಕೆಲಸ ಮಾಡುತ್ತಿಲ್ಲ, ಹಿಂದೂ ಧರ್ಮವನ್ನು ಒಗ್ಗೂಡಿಸಲು ಹಾಗೂ ಇದರ ಸಬಲೀಕರಣಕ್ಕೆ ಮಾತ್ರ ಶ್ರಮಿಸುತ್ತದೆ ಎಂದು ಕಲ್ಕತ್ತದಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕ್ರಮವೊಂದರಲ್ಲಿ ಮೋಹನ್ ಭಾಗವತ್ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ ನಡುವಿನ ಸಮರದ ಬಗ್ಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಆರ್ ಎಸ್ ಎಸ್ ಯಾರ ವಿರುದ್ಧವೂ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ.
ಬ್ರಿಗೇಡ್ ಪ್ಯಾರೇಡ್ ಮೈದಾನದಲ್ಲಿ ಆರ್ ಎಸ್ ಎಸ್ ರ್ಯಾಲಿ ನಡೆಸಲು ಕಲ್ಕತ್ತಾ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಪೋಲಿಸರು ಅನುಮತಿ ನೀಡಲು ನಿರಾಕರಿಸಿದರು. ಪೊಲೀಸರ ಈ ನಿರ್ಧಾರದ ವಿರುದ್ಧ ಆರ್ ಎಸ್ ಎಸ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತು. ವಿಚಾರಣೆ ನಡೆಸಿದ ನ್ಯಾಯಾಲಯ ಯ್ಯಾಲಿ ಸ್ಥಳದಲ್ಲಿ ಅಗತ್ಯಕ್ಕೆ ತಕ್ಕಷ್ಟು ಪೊಲೀಸರನ್ನು ನಿಯೋಜನೆ ಮಾಡಬೇಕೆಂದು ಹೇಳಿತು.
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹಾಗೂ ಬಿಜೆಪಿ ನಡುವಿನ ಸಮರ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.