
ತುಮಕೂರು[ಜೂ.23]: ಕಾಂಗ್ರೆಸ್ ಸೋಲಿಗೆ ಜೆಡಿಎಸ್ ಜತೆಗಿನ ಮೈತ್ರಿ ಕಾರಣ ಎಂಬ ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಅವರ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊಯ್ಲಿ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಆ ರೀತಿ ಹೇಳಿಕೆ ನೀಡಿರಬಹುದು ಎಂದು ಹೇಳಿದರು.
ಕಾಂಗ್ರೆಸ್ ಸೋಲಿಗೆ ದಳ ಮೈತ್ರಿ ಕಾರಣ: ಮೊಯ್ಲಿ
ಕೊರಟಗೊರೆ ತಾಲೂಕಿನ ತೋವಿನಕೆರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ವೀರಪ್ಪ ಮೊಯ್ಲಿ ಅವರು ಸೋತಿದ್ದಾರೆ. ಹೀಗಾಗಿ ಅವರು ಮೈತ್ರಿ ಕುರಿತು ಆ ರೀತಿಯ ಹೇಳಿಕೆ ನೀಡಿರಬಹುದು. ಆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ನಮಗೆ ನಮ್ಮ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರ ಮುಖ್ಯವಾಗುತ್ತದೆಯೇ ಹೊರತು ವೈಯಕ್ತಿಕ ಅಭಿಪ್ರಾಯಗಳಲ್ಲ ಎಂದು ಪರಮೇಶ್ವರ್ ಹೇಳಿದರು.
ಸಿಎಂ ಊರೂರು ಸುತ್ತಿದ್ರೆ ಸಾಲಲ್ಲ, ಈ ಕೆಲ್ಸ ಮಾಡ್ಬೇಕಿತ್ತು: ಕೈ ನಾಯಕ ಕಿಡಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.