ರೇಣುಕಾಚಾರ್ಯ ಪ್ರಯಾಣಿಸುತ್ತಿದ್ದ ಕಾರಿನಲ್ಲಿ 2.96 ಲಕ್ಷ ರೂ. ಹಣ ಪತ್ತೆ

Published : Apr 07, 2017, 02:49 PM ISTUpdated : Apr 11, 2018, 12:42 PM IST
ರೇಣುಕಾಚಾರ್ಯ ಪ್ರಯಾಣಿಸುತ್ತಿದ್ದ ಕಾರಿನಲ್ಲಿ 2.96 ಲಕ್ಷ ರೂ. ಹಣ ಪತ್ತೆ

ಸಾರಾಂಶ

ಏ.9ರಂದು ಗುಂಡ್ಲುಪೇಟೆ ಉಪಚುನಾವಣೆ ಪ್ರಯುಕ್ತ ಚುನಾವಣಾ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗನ ಕಾರಿನಲ್ಲಿ ರೇಣುಕಾಚಾರ್ಯ ಅವರು ಪ್ರಯಾಣಿಸುತ್ತಿದ್ದರು.

ಗುಂಡ್ಲುಪೇಟೆ(ಏ.07): ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ 2.96 ಲಕ್ಷ ರೂ. ಹಣ ಪತ್ತೆಯಾಗಿದೆ.

ಏ.9ರಂದು ಗುಂಡ್ಲುಪೇಟೆ ಉಪಚುನಾವಣೆ ಪ್ರಯುಕ್ತ ಚುನಾವಣಾ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗನ ಕಾರಿನಲ್ಲಿ ರೇಣುಕಾಚಾರ್ಯ ಅವರು ಪ್ರಯಾಣಿಸುತ್ತಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ  KA 02, MT 22 ಕಾರನ್ನು ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ.

ತದ ನಂತರ ಬೆಂಬಲಿಗನ ಕಾರು ಬಿಟ್ಟು ತಮ್ಮ ಕಾರಿನಲ್ಲಿ ರೇಣುಕಾಚಾರ್ಯ ಎಸ್ಕೇಪ್ ಆಗಿದ್ದಾರೆ. ಹಣವಿರುವ ಬಗ್ಗೆ ಸುವರ್ಣ ಸುದ್ದಿ ವಾಹಿನಿಯ ಜೊತೆ ಮಾತನಾಡಿದ ರೇಣುಕಾಚಾರ್ಯ ತಾವು ಯಾವುದೇ ತನಿಖೆಯನ್ನು ಎದುರಿಸಲು ಸಿದ್ದವಿರುವುದಾಗಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿವಾಹಿತ ಮಹಿಳೆಯ ಜೊತೆ ಮಾತು: 22 ವರ್ಷದ ಯುವಕನ ಹತ್ಯೆ
ಬಳ್ಳಾರಿ ವಾಲ್ಮೀಕಿ ಬ್ಯಾನರ್ ಗಲಭೆ: ಮೃತ ಕಾಂಗ್ರೆಸ್ ಕಾರ್ಯಕರ್ತನ ದೇಹದಲ್ಲಿದ್ದದ್ದು ಖಾಸಗಿ ಬುಲೆಟ್- ಎಸ್ಪಿ ಮಾಹಿತಿ!