
ಬಳ್ಳಾರಿ(ಜು.14): ಗಣಿನಾಡು ಬಳ್ಳಾರಿಯಲ್ಲಿ ಮಂಗಗಳ ಹಾವಳಿ ಜಾಸ್ತಿಯಾಗಿದೆ. ಕಳೆದ ಒಂದು ವಾರದಿಂದ ಬೈಲೂರು ಗ್ರಾಮಕ್ಕೆ 10ಕ್ಕೂ ಹೆಚ್ಚು ಮಂಗಗಳ ಗುಂಪೊಂದು ಲಗ್ಗೆ ಇಟ್ಟಿದೆ. ಜಮೀನುಗಳ ಕೆಲಸ ಕಾರ್ಯಗಳಿಗೆ ಹೊಗಿದ್ದ ಸುಮಾರು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದೆ.
ಮಹಿಳೆಯರು, ಮಕ್ಕಳು, ವಯೋವೃದ್ದರು ಮನೆಯಿಂದ ಹೊರ ಹೋಗಲು ಹೆದರುತ್ತಿದ್ದಾರೆ. ಮನೆಯಿಂದ ಹೊರಬರಬೇಕಾದರೆ ಕೈಯಲ್ಲಿ ಕಟ್ಟಿಗೆ, ದೊಣ್ಣೆ ಹಿಡಿದುಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯಲ್ಲಿ ತಿರುಗಾಡುವ ಬೈಕ್ ಸವಾರರಂತು ಮಂಗಗಳ ಕಾಟಕ್ಕೆ ರೋಸಿ ಹೊಗಿದ್ದಾರೆ.
ಮಂಗನ ಕಾಟಕ್ಕೆ ತುತ್ತಾಗಿರುವ ಗ್ರಾಮಸ್ಥರು ಕೆಲವರು ಚಿಕಿತ್ಸೆ ಪಡೆದರೆ, ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕು ತಂದರೂ ಅಧಿಕಾರಿಗಳು ಭೇಟಿ ನೀಡಿ ಬರಿಗೈಯಲ್ಲಿ ವಾಪಸ್ ಹೊಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.