4 ರಾಜ್ಯಗಳ ಭಾರೀ ಪ್ರವಾಹಕ್ಕೆ 200 ಬಲಿ

Published : Aug 13, 2019, 07:47 AM IST
4 ರಾಜ್ಯಗಳ ಭಾರೀ ಪ್ರವಾಹಕ್ಕೆ 200 ಬಲಿ

ಸಾರಾಂಶ

ದೇಶದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾಲ್ಕು ರಾಜ್ಯಗಳ ಪ್ರವಾಹದಲ್ಲಿ 200 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ತಿರುವನಂತಪುರ [ಆ.13]: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಾಗೂ ಅಪಾಯದ ಮಟ್ಟಮೀರಿ ನದಿಗಳ ಹರಿಯುವಿಕೆಯಿಂದ ಪ್ರವಾಹ ಸಂಕಷ್ಟಕ್ಕೀಡಾದ ಕರ್ನಾಟಕ, ಗುಜರಾತ್‌, ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಇದುವರೆಗೂ ಸುಮಾರು 200 ಮಂದಿ ಸಾವನ್ನಪ್ಪಿದ್ದಾರೆ. 

ಈ ನಡುವೆ ದಕ್ಷಿಣದ ರಾಜ್ಯಗಳಲ್ಲಿ ಮಳೆ ಕಡಿಮೆಯಾಗಿದ್ದು, ಪ್ರವಾಹದಲ್ಲೂ ಇಳಿಕೆ ಕಂಡುಬಂದಿದೆ. ಹೀಗಾಗಿ ಈ ರಾಜ್ಯಗಳಲ್ಲಿ ಇದೀಗ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಈ 4 ರಾಜ್ಯಗಳಲ್ಲಿ ಪ್ರವಾಹದಿಂದ 12 ಲಕ್ಷಕ್ಕಿಂತ ಹೆಚ್ಚು ಜನರ ಜೀವನ ಅತಂತ್ರವಾಗಿದೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಏತನ್ಮಧ್ಯೆ, ಉತ್ತರಾಖಂಡ್‌ ಹಾಗೂ ಜಮ್ಮು-ಕಾಶ್ಮೀರದಲ್ಲಿಯೂ ಸುರಿದ ಧಾರಾಕಾರ ಮಳೆಯಿಂದ ಭೂಕುಸಿತ ಸಂಭವಿಸಿದ್ದು, 9 ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಮತ್ತೊಂದೆಡೆ, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌ ಮಧ್ಯಪ್ರದೇಶ, ಉತ್ತರ ಪ್ರದೇಶ, ಪಂಜಾಬ್‌ ಸೇರಿ ಇತರೆಡೆಗಳಲ್ಲೂ ಭಾರೀ ಮಳೆಯಾಗಿದೆ. 

ಇನ್ನೊಂದೆಡೆ, ಗುಜರಾತ್‌ನ ಕಛ್‌ನಲ್ಲಿ ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆಯಲ್ಲಿ ಸಿಲುಕಿದ್ದ 125 ಮಂದಿಯನ್ನು ಭಾರತೀಯ ವಾಯುಪಡೆ ಎಂಐ-17 ಹೆಲಿಕಾಪ್ಟರ್‌ ಮೂಲಕ ರಕ್ಷಣೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!