
ನವದೆಹಲಿ: ಒಂದು ತಿಂಗಳವರೆಗೆ ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನವು ಜು.12ರಿಂದ ಪ್ರಾರಂಭವಾಗುವ ಸಾಧ್ಯತೆಯಿದೆ.
ಮುಂಗಾರು ಅಧಿವೇಶನ ಜು.12ರಿಂದ ಪ್ರಾರಂಭವಾಗಿ ಆ.11ರಂದು ಮುಕ್ತಾಯಗೊಳಿಸಬೇಕು ಎಂಬ ಪ್ರಸ್ತಾವನೆಯನ್ನು ಸಂಸತ್ತಿನ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಮುಂದಿಡಲಾಗಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ ಸಮಿತಿ ಜೂ.20ರಂದು ಅಧಿವೇಶನ ದಿನಾಂಕ ನಿಗದಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಒಮ್ಮತ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಎಲ್ಲಾ ಪಕ್ಷಗಳೊಂದಿಗೆ ‘ಪ್ರಜಾಪ್ರ ಭುತ್ವದ ಸ್ಫೂರ್ತಿ'ಯಿಂದ ಮಾತುಕತೆ ನಡೆಸಲಿದೆ ಎಲ್ಲಾ ಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.