
ನವದೆಹಲಿ : ಮುಂಗಾರು ಮಳೆ ಬಂಗಾಳ ಕೊಲ್ಲಿಯ ಆಸುಪಾಸಿನ ಪ್ರದೇಶಗಳಲ್ಲಿ ಅವಧಿಗೂ ಮುನ್ನವೇ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಂಡಮಾನ್ ಹಾಗೂ ದಕ್ಷಿಣ ಅಂಡಮಾನ್ ಸಮುದ್ರ ತೀರಗಳಿಗೆ ಮುಂದಿನ 72 ಗಂಟೆಯಲ್ಲಿ ಮುಂಗಾರು ಪ್ರವೇಶಿಬಹುದು ಎನ್ನಲಾಗಿದೆ.
ಮೇ 18 ರಂದೇ ಮುಂಗಾರು ಪ್ರವೇಶಿಸಿದ್ದು, ವೇಗದ ಮಿತಿ ಕಡಿಮೆ ಇದ್ದ ಕಾರಣದಿಂದ ಮುಂಗಾರು ತಡೆಯಲ್ಪಟ್ಟಿದ್ದು, ಮುಂದಿನ 4- 5 ದಿನದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕೇರಳಕ್ಕೆ ಜೂನ್ 6 ರಂದು ಮುಂಗಾರು ಪ್ರವೇಶಿಸಲಿದೆ. ಸಾಮಾನ್ಯಕ್ಕಿಂತ 6 ದಿನ ತಡವಾಗಿ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಆದರೆ ಇದೀಗ ನಿರೀಕ್ಷೆಗಿಂತ ಮುಂಚೆಯೇ ಮಳೆ ಸುರಿವ ಸೂಚನೆ ನೀಡಿದೆ.
ಈಗಾಗಲೇ ಹಲವು ಪ್ರದೇಶಗಳಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅವಾಂತರ ಸೃಷ್ಟಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.