ಶರಾವತಿ ನದಿ ಉಳಿಸಿ ಬೈಕ್‌ ರ‍್ಯಾಲಿಯಲ್ಲಿ ಶ್ರೀಗಳು ಭಾಗಿ

Published : Jul 10, 2019, 11:18 AM ISTUpdated : Jul 10, 2019, 11:19 AM IST
ಶರಾವತಿ ನದಿ ಉಳಿಸಿ ಬೈಕ್‌ ರ‍್ಯಾಲಿಯಲ್ಲಿ ಶ್ರೀಗಳು ಭಾಗಿ

ಸಾರಾಂಶ

ಶರಾವತಿ ನದಿ ನೀರು ಉಳಿಸಿ ಅಭಿಯಾನದ ಮೋಟಾರ್‌ ಬೈಕ್‌ ರ‍್ಯಾಲಿಯನ್ನು ಮೂಲೆಗದ್ದೆ ಮಠದ ಚನ್ನಬಸವ ಸ್ವಾಮೀಜಿ, ನಾರಾಯಣಗುರು ಮಠದ ರೇಣುಕಾನಂದ ಸ್ವಾಮೀಜಿ ಉದ್ಘಾಟಿಸಿದರು.

ಹೊಸನಗರ: ಶರಾವತಿ ನದಿ ನೀರು ಉಳಿಸಿ ಅಭಿಯಾನದ ಮೋಟಾರ್‌ ಬೈಕ್‌ ರ‍್ಯಾಲಿಯನ್ನು ಸಮೀಪದ ಶರಾವತಿ ನದಿ ಸೇತುವೆ ಸಮೀಪದಲ್ಲಿ ಮೂಲೆಗದ್ದೆ ಮಠದ ಚನ್ನಬಸವ ಸ್ವಾಮೀಜಿ, ನಾರಾಯಣಗುರು ಮಠದ ರೇಣುಕಾನಂದ ಸ್ವಾಮೀಜಿ ಉದ್ಘಾಟಿಸಿದರು. ಜಡಿ ಮಳೆಯಲ್ಲಿಯೂ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ತನಕ ನಡೆದ ಬೈಕ್‌ ರ‍್ಯಾಲಿಯಲಿಯಲ್ಲಿ ಇಬ್ಬರು ಶ್ರೀಗಳು ಸಹಪ್ರಯಾಣಿಕರಾಗಿ ಸುಮಾರು 70 ಕಿ.ಮೀ ಪ್ರಯಾಣಿಸಿದ್ದಾರೆ.

ತಾಲೂಕಿನ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಬರುವ ಗ್ರಾಮಸ್ಥರು, ಎಲ್ಲಾ ಶಾಲೆ, ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನಾ ರ‍್ಯಾಲಿಯನ್ನು ಸ್ವಾಗತಿಸಿದರು. ರ‍್ಯಾಲಿಯಲ್ಲಿ ಶರಾವತಿ ಉಳಿಸಿ ಅಭಿಯಾನದ ಸಂಘಟಕರು, ವಿವಿಧ ಸಂಘಟನೆಯ ಸದಸ್ಯರು, ಸ್ತ್ರೀಶಕ್ತಿ, ಸ್ವ ಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು, ಜನಪ್ರತಿನಿಧಿಗಳೂ ಭಾಗವಹಿಸಿದ್ದರು. ಮೂಲೆಗದ್ದೆ ಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, 'ಬಂದ್‌ ಕರೆಗೆ ಎಲ್ಲರೂ ಸಹಕರಿಸಬೇಕು' ಎಂದು ಮನವಿ ಮಾಡಿದರು. ನಿಟ್ಟೂರು ನಾರಾಯಣಗುರು ಮಠದ ರೇಣುಕಾನಂದ ಶ್ರೀ ಮಾತನಾಡಿ, 'ನಮ್ಮ ನದಿಯ ಉಳಿವಿಗಾಗಿ ಇದೊಂದು ಪಕ್ಷಾತೀತ ಹೋರಾಟ' ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇದೇ ಮೊದಲ ಬಾರಿಗೆ ಅತೀ ದುಬಾರಿಯಾದ ಬೆಳ್ಳಿ, ಚಿನ್ನಕ್ಕಿಂತ ವೇಗದಲ್ಲಿ ಸಾಗುತ್ತಿದೆ ಸಿಲ್ವರ್
ರಾಜ್ಯದ ತಾಪಮಾನ 12°Cಗೆ ಕುಸಿತ-ಕರುನಾಡಿಗೆ ಶೀತ ಕಂಟಕ ಖಚಿತ-ಬೆಂಗಳೂರು ಜನತೆಗೆ ಮೈನಡುಕ ಉಚಿತ!