
ಮಂಡ್ಯ : ಈ ಬಾರಿ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಎಲ್ಲಾ ಡ್ಯಾಂಗಳೂ ಸಂಪೂರ್ಣ ಭರ್ತಿ ಯಾಗಿವೆ. ಕೆಆರ್ ಎಸ್ ಡ್ಯಾಂನಲ್ಲಿಯೂ ಕೂಡ ಹೆಚ್ಚಿನ ನೀರು ಸಂಗ್ರಹವಾಗಿದ್ದು, ಇದರಿಂದ ದಾಖಲೆ ಪ್ರಮಾಣದಲ್ಲಿ ನೀರನ್ನು ಹರಿಸಲಾಗುತ್ತಿದೆ.
ತಮಿಳುನಾಡಿಗೆ 86 ವರ್ಷಗಳ ಇತಿಹಾಸದಲ್ಲಿ ಕೆ ಆರ್ ಎಸ್ ಜಲಾಶಯದಿಂದ ದಾಖಲೆ ಪ್ರಮಾಣದ ನೀರು ಹರಿದಿದೆ. ಕೆ ಆರ್ ಎಸ್ ನಿಂದ 149.50 ಟಿಎಂಸಿ ನೀರು ತಮಿಳುನಾಡಿಗೆ ಹರಿದಿದೆ. ಇನ್ನು ಕಬಿನಿ ಜಲಾಶಯದಿಂದಲೂ ಕೂಡ 161.04 ಟಿಎಂಸಿ ನೀರು ತಮಿಳುನಾಡಿಗೆ ಹರಿದಿದೆ.
ತಮಿಳುನಾಡಿಗೆ ವಾರ್ಷಿಕ 177.25 ಟಿಎಂಸಿ ನೀರನ್ನು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನಿಡಿತ್ತು, ಈ ಬಾರಿ ಜೂನ್ ತಿಂಗಳಿನಲ್ಲಿ 9.23 ಟಿಎಂಸಿ, ಜುಲೈ ತಿಂಗಳಿನಲ್ಲಿ 31.93 ಟಿಎಂಸಿ, ಆಗಸ್ಟ್ ತಿಂಗಳಿನಲ್ಲಿ 46.16 ಟಿಎಂಸಿ ನೀರು ಬಿಡಲು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
ಆದರೆ ಈ ಬಾರಿ ಕೇವಲ ಮೂರು ತಿಂಗಳಿನಲ್ಲಿಯೇ 310.549 ಟಿಎಂಸಿ ನೀರು ಹರಿಸಲಾಗಿದೆ. ಕೆ ಆರ್ ಎಸ್ ಹಾಗೂ ಕಬಿನಿ ಜಲಾಶಯಗಳಿಂದ 310.549 ಟಿಎಂಸಿ ನೀರು ತಮಿಳುನಾಡಿಗೆ ಹರಿಸಲಾಗಿದೆ. ಇದರಿಂದ ಮೆಟ್ಟೂರು ಜಲಾಶಯ ಆಗಸ್ಟ್ ತಿಂಗಳಿನಲ್ಲಿಯೇ ಮೂರು ಬಾರಿ ಭರ್ತಿಯಾಗಿದ್ದು, ತಮಿಳುನಾಡು ಉಳಿದ ನೀರನ್ನ ಸಮುದ್ರಕ್ಕೆ ಹರಿಸುತ್ತಿದೆ ಎನ್ನಲಾಗಿದೆ.
ಇತ್ತ ಕಾವೇರಿಗೆ ಮೇಕೆದಾಟು ಬಳಿ ಮತ್ತೊಂದು ಡ್ಯಾಂ ನಿರ್ಮಿಸಿ ಪೋಲಾಗುವ ನೀರನ್ನು ಶೇಕರಿಸುವಂತೆ ರಾಜ್ಯದ ಹೋರಾಟಗಾರರ ಒತ್ತಾಯ ಮಾಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.