
ಬೆಂಗಳೂರು : ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ವೃದ್ಧ ತಾಯಿಯೂ ಸಾವನ್ನಪ್ಪಿದ ಮನಃ ಕಲುಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶೇಷಾದ್ರಿಪುರಂ ನಿವಾಸಿ 83 ವರ್ಷದ ವಳ್ಳಿಯಮ್ಮರ ಪುತ್ರ 62 ವರ್ಷದ ರವಿಚಂದ್ರ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದರು. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಸಾವನ್ನಪ್ಪಿದ್ದು, ಈ ಸುದ್ದಿ ಕೇಳಿ ತಾಯಿಯೂ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
"
ಕ್ಯಾಟರಿಂಗ್ ಬ್ಯುಸಿನೆಸ್ ನಡೆಸುತಿದ್ದ ರವಿ ಚಂದ್ರ ಅವರು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ತೆರಳುತಿದ್ದ ವೇಳೆ ರಸ್ತೆ ಮಧ್ಯದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದರು.
ಕೂಡಲೇ ಅವರು ತೆರಳುತ್ತಿದ್ದ ಕ್ಯಾಬ್ ಚಾಲಕನೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಬುಧವಾರ ಮೃತಪಟ್ಟಿದ್ದರು.
ಪುತ್ರನ ನಿಧನದ ವಿಚಾರ ತಿಳಿಯುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದು ವೃದ್ಧೆಯೂ ಸಾವನ್ನಪ್ಪಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.