
ಬೆಂಗಳೂರು : ಹೆಣ್ಣು ನವಜಾತ ಶಿಶುವನ್ನು ತಾಯಿ ಆಸ್ಪತ್ರೆಯಲ್ಲೇ ಬಿಟ್ಟು ಹೋಗಿರುವ ಘಟನೆ ನಡೆದಿದ್ದು, ವಿ.ವಿ.ಪುರ ಪೊಲೀಸರು ಮಗುವಿನ ತಾಯಿಗಾಗಿ ಹುಡುಕಾಟ ನಡೆಸಿದ್ದಾರೆ. ಗೌರಿಬಿದನೂರು ಮೂಲದ ಲಕ್ಷ್ಮೇದೇವಿ ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ.
ಏ.25ರಂದು ಲಕ್ಷ್ಮೇದೇವಿ ಅವರಿಗೆ ದಾಖಲಾಗಿದ್ದು, ಹೆಣ್ಣು ಮಗು ಜನಿಸಿತ್ತು. ಲಕ್ಷ್ಮೇ ದೇವಿ ಅವರ ಜತೆ ಯುವಕನೊಬ್ಬ ಬಂದಿದ್ದ, ಆತನೊಂದಿಗೆ ಮಹಿಳೆ ಹೋಗಿದ್ದಾರೆ. ಮಗು ನಿರಂತರವಾಗಿ ಅಳುತ್ತಿತ್ತು. ಆಸ್ಪತ್ರೆ ಸಿಬ್ಬಂದಿ ಪರಿಶೀಲಿಸಿದಾಗ ಮಹಿಳೆ ಮಗುವನ್ನು ಬಿಟ್ಟು ಹೋಗಿರುವುದು ತಿಳಿದಿದೆ. ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಗುವನ್ನು ಹಸ್ತಾಂತರಿಸಲಾಗಿದೆ. ವಾಣಿ ವಿಲಾಸ್ ಆಸ್ಪತ್ರೆ ಅಧಿಕಾರಿ ನೀಡಿದ ದೂರಿನ ಆಧಾರ ಮೇಲೆ ವಿವಿಪುರ ಪೊಲೀಸರು ಲಕ್ಷ್ಮೇದೇವಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಕ್ಷ್ಮೇದೇವಿ ಆಸ್ಪತ್ರೆಗೆ ದಾಖಲಾಗುವ ಮುನ್ನ ನೀಡಿದ ಮೊಬೈಲ್ ನಂಬರ್ಗೆ ಕರೆ ಮಾಡಲಾಗಿದ್ದು, ಅದು ನಕಲಿ ನಂಬರ್ ಎಂಬುದು ಬೆಳಕಿಗೆ ಬಂದಿದೆ. ಮಹಿಳೆ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.