ಪುಟ್ಟ ಮಗುವಿನ ಕೈ ಹಿಡಿದುಕೊಂಡೇ ಸಾವನ್ನಪ್ಪಿದ ತಾಯಿ!

Published : Aug 13, 2019, 10:09 AM IST
ಪುಟ್ಟ ಮಗುವಿನ ಕೈ ಹಿಡಿದುಕೊಂಡೇ ಸಾವನ್ನಪ್ಪಿದ ತಾಯಿ!

ಸಾರಾಂಶ

ಪುಟ್ಟ ಮಗುವಿನ ಕೈ ಹಿಡಿದುಕೊಂಡೇ ಸಾವನ್ನಪ್ಪಿದ ತಾಯಿ| ಕೇರಳದ ಮಲಪ್ಪುರಂ ಜಿಲ್ಲೆಯಲ್ಲೊಂದು ಕರುಣಾಜನಕ ಕತೆ

ಮಲಪ್ಪುರಂ[ಆ.13]: ಕಳೆದ ವರ್ಷ ಕಂಡುಕೇಳರಿಯದ ಮಳೆ, ಪ್ರವಾಹಕ್ಕೆ ತುತ್ತಾಗಿದ್ದ ಕೇರಳದಲ್ಲಿ ಈ ವರ್ಷವೂ ಮತ್ತೆ ಮಳೆ ತನ್ನ ರುದ್ರಾವತಾರ ತೋರಿದೆ. ಕಳೆದೊಂದು ವಾರದಿಂದ ಸುರಿದ ಭಾರೀ ಮಳೆ ಜನಜೀವನವನ್ನು ಪೂರ್ಣ ಅಸ್ತವ್ಯಸ್ತಗೊಳಿಸಿದೆ. ಲಕ್ಷಾಂತರ ಜನರನ್ನು ನಿರ್ವಸಿತಗೊಳಿಸಿದ್ದರೆ, 70ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 50ಕ್ಕೂ ಹೆಚ್ಚು ಜನ ಇನ್ನೂ ನಾಪತ್ತೆಯಾಗಿದ್ದಾರೆ. ನಿಧಾನವಾಗಿ ಮಳೆ ಕಡಿಮೆಯಾಗುತ್ತಿದ್ದಂತೆ ಒಂದೊಂದು ಕರುಣಾಜನಕ ಕತೆ ಹೊರಬರುತ್ತಿವೆ. ಅದರಲ್ಲೂ ಮಲಪ್ಪುರ ಜಿಲ್ಲೆಯೊಂದರಲ್ಲಿ ಕಂಡುಬಂದ ಸಾವನ್ನಪ್ಪಿದ ತಾಯಿ ಮತ್ತು ಆಕೆಯ ಕೇವಲ 6 ತಿಂಗಳ ಮಗು ಒಬ್ಬರ ಕೈಯನ್ನು ಒಬ್ಬರು ಬಲವಾಗಿ ಹಿಡಿದುಕೊಂಡ ದೃಶ್ಯ ಎಲ್ಲರನ್ನೂ ಕಣ್ಣೀರಿಡುವಂತೆ ಮಾಡಿದೆ.

ವರುಣನ ಅಬ್ಬರಕ್ಕೆ ಕರುನಾಡು ತತ್ತರ: ಮಳೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಕ್ಲಿಕ್ಕಿಸಿ

ಮಲಪ್ಪುರಂ ಜಿಲ್ಲೆಯ ಕೊಟ್ಟಕುನ್ನು ಎಂಬಲ್ಲಿ ದೊರೆತ ತಾಯಿ ಹಾಗೂ ಪುಟ್ಟಮಗುವಿನ ಮೃತದೇಹಗಳು ಅನಾಹುತದ ಭೀಕರತೆಯನ್ನು ಸಾರಿ ಹೇಳುತ್ತಿದೆ. ತನ್ನ ಒಂದೂವರೆ ವರ್ಷದ ಮಗುವಿನ ಕೈ ಹಿಡಿದುಕೊಂಡು ಮಲಗಿದ್ದ ತಾಯಿಯ್ಬೊಬ್ಬಳು ಅದೇ ಸ್ಥಿತಿಯಲ್ಲೇ ಸಾವಿಗೀಡಾಗಿದ್ದಳು. ಸಾವಿನ ಬಳಿಕವೂ ಆಕೆ ತನ್ನ ಪುಟ್ಟಮಗುವಿನ ಕೈ ಹಿಡಿಕೊಂಡಿರುವ ದೃಶ್ಯ ರಕ್ಷಣಾ ತಂಡದ ಕಣ್ಣಲ್ಲೂ ನೀರು ತರಿಸಿದೆ.

ಆಗಿದ್ದೇನು?

ಗೀತು (21) ಎಂಬಾಕೆ ತನ್ನ ಒಂದೂವರೆ ವರ್ಷದ ಮಗ ಧ್ರವ್‌ ಜೊತೆ ಹಾಸಿಗೆಯಲ್ಲಿ ಮಲಗಿದ್ದ ವೇಳೆ ಶುಕ್ರವಾರ ಅನಿರೀಕ್ಷಿತ ಪ್ರವಾಹ ಅಪ್ಪಳಿಸಿ ಭೂಕುಸಿತ ಸಂಭವಿಸಿತ್ತು. ನಿದ್ದೆಯಲ್ಲಿ ಇದ್ದ ಅವರಿಗೆ ಏನಾಗತ್ತಿದೆ ಎಂದು ಗೊತ್ತಾಗುವಷ್ಟರಲ್ಲೇ ಎಲ್ಲವೂ ಮುಗಿದು ಹೋಗಿತ್ತು. ತಾಯಿ ಮತ್ತು ಮಗು ಇದ್ದ ಸ್ಥಿತಿಯಲ್ಲೇ ಸಾವನ್ನಪ್ಪಿದ್ದರು. ಅದೃಷ್ಟವಶಾತ್‌ ಆಕೆಯ ಪತಿ ಶರತ್‌ ದುರ್ಗಟನೆಯಿಂದ ಪಾರಾಗಿದ್ದಾರೆ. ಆದರೆ, ಶರತ್‌ ತಾಯಿ ಸರೋಜಿನಿ ಕೂಡ ಈ ಘಟನೆಯಲ್ಲಿ ಅಸುನೀಗಿದ್ದು, ಆಕೆಯ ಮೃತ ದೇಹವನ್ನೂ ಹೊರತೆಗೆಯಲಾಗಿದೆ. ಸುದೀರ್ಘ ಶೋಧ ಕಾರ್ಯಾಚರಣೆಯ ವೇಳೆ ತಾಯಿ ಮತ್ತು ಮಗುವಿನ ಮೃತ ದೇಹ ಪತ್ತೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ