4 ದಿನದ ಹಸುಗೂಸಿನೊಂದಿಗೆ ಸೊಸೆಗೆ ಗೋ ಔಟ್ ಎಂದ ಅತ್ತೆ-ಮಾವ

Published : Dec 10, 2018, 01:16 PM ISTUpdated : Dec 10, 2018, 07:58 PM IST
4 ದಿನದ ಹಸುಗೂಸಿನೊಂದಿಗೆ ಸೊಸೆಗೆ ಗೋ ಔಟ್ ಎಂದ ಅತ್ತೆ-ಮಾವ

ಸಾರಾಂಶ

ಹಸುಗೂಸಿನೊಂದಿಗೆ ಬಾಣಂತಿಯನ್ನು ಮನೆಯಿಂದ ಹೊರಗೆ ಹಾಕಿದ್ದು, ದೇವಾಲಯದ ಆವರಣದಲ್ಲಿಯೇ ದಿನ ಕಳೆದ ಮನಕಲುಕುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬಳಿಕ ಸಾರ್ವಜನಿಕರು ಈಕೆಯನ್ನು ರಕ್ಷಣೆ ಮಾಡಿದ್ದಾರೆ.

ಚಳ್ಳಕೆರೆ :  ಗಂಡನ ಮನೆಯವರು ಮನೆಗೆ ಬರಬೇಡ ಎಂದಿದ್ದರಿಂದ ನಾಲ್ಕು ದಿನದ ಮಗುವಿನೊಂದಿಗೆ ಬಾಣಂತಿಯೊಬ್ಬಳು ದೇವಸ್ಥಾನದ ಆವರಣದಲ್ಲಿಯೇ ಒಂದು ದಿನ ಕಾಲ ಕಳೆದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಕಣುವೆ ಮಾರಮ್ಮ ದೇವಸ್ಥಾನದಲ್ಲಿ ನಡೆದಿದೆ.

"

ಈ ಬಗ್ಗೆ ವಿಷಯ ತಿಳಿದ ಆರೋಗ್ಯಾಧಿಕಾರಿಗಳು ಮಗುವಿನೊಂದಿಗೆ ಅನಾಥವಾಗಿ ಮಲಗಿದ್ದ ಸಂತ್ರಸ್ತ ಬಾಣಂತಿ ಶಾರದಮ್ಮನನ್ನು ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ. ಶಾರದಮ್ಮ ಚಳ್ಳಕೆರೆ ತಾಲೂಕಿನ ಎನ್‌.ದೇವರಹಳ್ಳಿ ಗ್ರಾಮದವಳಾಗಿದ್ದಾಳೆ. ಕೆಲವು ವರ್ಷಗಳ ಹಿಂದೆ ಹಿರೇಹಳ್ಳಿ ಗ್ರಾಮದ ದುರುಗಪ್ಪ ಎಂಬುವರ ಪುತ್ರ ಮಲ್ಲಿಕಾರ್ಜುನನ ಜೊತೆ ವಿವಾಹವಾಗಿದ್ದರು. ಆದರೆ, ಕಳೆದ ಜೂನ್‌ ತಿಂಗಳಿನಲ್ಲಿ ಪತಿ ನಾಪತ್ತೆಯಾಗಿದ್ದರು. ಈ ಬಗ್ಗೆ ಶಾರದಮ್ಮ ಮಹಿಳಾ ಸಾಂತ್ವನ ಕೇಂದ್ರಕ್ಕೆ ಮತ್ತು ಜಿಲ್ಲಾ ರಕ್ಷಣಾಧಿ​ಕಾರಿಗಳಿಗೆ ದೂರು ನೀಡಿದ್ದರು. ಆದರೆ, ಮಲ್ಲಿಕಾರ್ಜುನ ಪತ್ತೆಯಾಗಿರಲಿಲ್ಲ.

ಡಿ.5ರಂದು ಈಕೆಗೆ 2ನೇ ಮಗುವಿನ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸ್ವಾಭಾವಿಕ ಹೆರಿಗೆ ಹಿನ್ನೆಲೆಯಲ್ಲಿ ಡಿ.8ರಂದು ಜಿಲ್ಲಾ ಆಸ್ಪತ್ರೆಯಿಂದ ಈಕೆಯನ್ನು ಬಿಡುಗಡೆಗೊಳಿಸಿದ್ದರು. ಆಕೆ ನೇರವಾಗಿ ಹಿರೇಹಳ್ಳಿಯ ಗಂಡನ ಮನೆಗೆ ತೆರಳಿದ್ದಾಳೆ. 

ಆದರೆ, ಅಲ್ಲಿ ಅತ್ತೆ, ಮಾವ ನಿನ್ನ ಗಂಡ ಬಂದರೆ ಮಾತ್ರ ನಿನಗೆ ಮನೆಯಲ್ಲಿ ಸ್ಥಾನವೆಂದು ಆಕೆಯನ್ನು ಹೊರ ಹಾಕಿದ್ದಾರೆ. ದಿಕ್ಕು ತೋಚದ ಈಕೆ ಸಾರ್ವಜನಿಕ ಆಸ್ಪತ್ರೆಯ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಳು. ಸುದ್ದಿ ತಿಳಿದ ಈಕೆಯ ತಂದೆ ಚನ್ನಪ್ಪ ಆಸ್ಪತ್ರೆಗೆ ಧಾವಿಸಿದ್ದು, ಮಗಳ ಯೋಗ ಕ್ಷೇಮ ನೋಡಿಕೊಳ್ಳುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು