ಮಣ್ಣಿನ ಗುಡ್ಡ ಕುಸಿದು 10 ಮಹಿಳೆಯರ ಜೀವಂತ ಸಮಾಧಿ

Published : Apr 11, 2019, 08:54 AM IST
ಮಣ್ಣಿನ ಗುಡ್ಡ ಕುಸಿದು 10 ಮಹಿಳೆಯರ ಜೀವಂತ ಸಮಾಧಿ

ಸಾರಾಂಶ

ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದ ಕೆಲಸಗಾರರರು| ಮಣ್ಣಿನ ಗುಡ್ಡ ಕುಸಿದು 10 ಮಹಿಳೆಯರ ಜೀವಂತ ಸಮಾಧಿ

ಹೈದರಾಬಾದ್‌[ಏ.11]: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಎಂನರೇಗಾ) ಯೋಜನೆಯಡಿ ಕೆಲಸ ಮಾಡುತ್ತಿದ್ದ ಕೆಲಸಗಾರರ ಮೇಲೆ ದೊಡ್ಡ ಮಣ್ಣಿನ ಗುಡ್ಡವೊಂದು ಬಿದ್ದ ಪರಿಣಾಮ 10 ಮಹಿಳೆಯರು ಜೀವಂತ ಸಮಾಧಿಯಾಗಿರುವ ದುರಂತ ಘಟನೆ ನಾರಾಯಣಪೇಟ್‌ ಜಿಲ್ಲೆಯಲ್ಲಿ ನಡೆದಿದೆ.

ಮಹಿಳಾ ಕಾರ್ಮಿಕರು ಮಧ್ಯಾಹ್ನದ ಊಟಕ್ಕೆಂದು 11.15ಕ್ಕೆ ಕುಳಿತಿದ್ದಾಗ ಮಣ್ಣಿನ ಗುಡ್ಡ ಕುಸಿದುಬಿದ್ದಿದ್ದು, 10 ಮಹಿಳೆಯರು ಮಣ್ಣಿನಲ್ಲಿ ಹೂತು ಹೋಗಿದ್ದಾರೆ. ಇನ್ನು ಮಣ್ಣಿನಡಿ ಸಿಕ್ಕಿಬಿದ್ದಿದ್ದ ಇಬ್ಬರನ್ನು ರಕ್ಷಿಸಲಾಗಿದ್ದು, ಓರ್ವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೋರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಭಾರೀ ಮಳೆಯಾದ ಪರಿಣಾಮವಾಗಿಯೇ ಈ ಮಣ್ಣಿನ ಗುಡ್ಡ ಕುಸಿದುಬಿದ್ದಿದೆ.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!