ಶೌಚ ಗುಂಡಿಗೆ ಕೈ ಹಾಕಿ ಶುಚಿಗೊಳಿಸಿದ ಸಂಸದ!

Published : Feb 19, 2018, 07:06 AM ISTUpdated : Apr 11, 2018, 12:42 PM IST
ಶೌಚ ಗುಂಡಿಗೆ ಕೈ ಹಾಕಿ ಶುಚಿಗೊಳಿಸಿದ ಸಂಸದ!

ಸಾರಾಂಶ

ಕ್ಷೇತ್ರ ಭೇಟಿ ವೇಳೆ ಸಂಸದನ ಜನಪರ ಕಾಯಕ

ಭೋಪಾಲ್‌: ಮಧ್ಯಪ್ರದೇಶ ಸಿಎಂ ಶಿವರಾಜ್‌ಸಿಂಗ್‌ ಚೌಹಾಣ್‌, ಈ ಹಿಂದೆ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿದ್ದಾಗ ಕಾಲು ಕೆಸರಾಗುತ್ತದೆ ಎಂದು ಅಧಿಕಾರಿಗಳ ಹೆಗಲ್ಲೇನ್ನೇರಿ ಹೋಗಿ ವಿವಾದಕ್ಕೆ ಕಾರಣರಾಗಿದ್ದರು. ಆದರೆ ಇದೀಗ ಅವರದ್ದೇ ರಾಜ್ಯದ ಬಿಜೆಪಿ ಸಂಸದರು, ಶೌಚಾಲಯವನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಬರಿಗೈಯಲ್ಲೇ ಶೌಚ ಗುಂಡಿಗೆ ಹಾಕಿ ಶುಚಿಗೊಳಿಸಿದ ಅಚ್ಚರಿಯ ಘಟನೆ ನಡೆದಿದೆ.

ರೇವಾ ಜಿಲ್ಲೆಯ ಸಂಸದ ಜನಾರ್ಧನ್‌ ಮಿಶ್ರಾ, ಖಜುವಾ ಗ್ರಾಮದ ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಶಾಲೆಯಲ್ಲಿರುವ ಶೌಚಾಲಯ ಕಟ್ಟಿಕೊಂಡಿದ್ದು, ಮಕ್ಕಳು ಶೌಚಾಲಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬ ವಿಷಯ ಅರಿತುಕೊಂಡರು. ಈ ವೇಳೆ ಅಂಗಿಯ ತೋಳುಗಳನ್ನು ಮೇಲಕ್ಕೇರಿಸಿಕೊಂಡ ಸಂಸದ ಜನಾರ್ಧನ್‌, ಬರಿಗೈಯಲ್ಲೇ ಭಾರತೀಯ ಶೈಲಿಯಲ್ಲಿರುವ ಶೌಚಾಲಯದಲ್ಲಿ ಕಟ್ಟಿಕೊಂಡಿದ್ದ ಮಣ್ಣನ್ನು ಹೊರ ತೆಗೆದು ಹಾಕಿದ್ದಾರೆ.

ಈ ನಡುವೆ, ವ್ಯಕ್ತಿಯೋರ್ವ ಸಂಸದ ಮಿಶ್ರಾ ಅವರಿಗೆ ಶೌಚಾಲಯ ಶುಚಿ ಕೆಲಸವನ್ನು ತಾನೇ ಮಾಡುವುದಾಗಿ ವಿನಂತಿಸಿಕೊಳ್ಳುತ್ತಾನೆ. ಆದರೆ, ಕೆಲಸಗಾರನ ಮಾತನ್ನು ಕಿವಿಗೆ ಹಾಕಿಕೊಳ್ಳದ ಮಿಶ್ರಾ, ಶೌಚಾಲಯದಲ್ಲಿ ಕಟ್ಟಿಕೊಂಡಿದ್ದ ಮಣ್ಣನ್ನು ಹೊರತೆಗೆದು ಹಾಕಿ, ಶೌಚಾಲಯ ಸಂಪೂರ್ಣ ದುರಸ್ತಿಯಾಗಿದೆಯೇ ಎಂಬುದರ ಬಗ್ಗೆ ತಾವೇ ಖುದ್ದಾಗಿ ನೀರು ಹಾಕಿ ಪರಿಶೀಲಿಸುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂದಿನ ಚುನಾವಣೆಗೆ ನಾನು ನಿಲ್ಲದಿದ್ದರೂ ಸರಿ, ಆರ್.ಅಶೋಕ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಿ ಸೋಲಿಸಿಯೇ ಸಿದ್ಧ!
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್; ಸಿಬಿಐ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು