ಟ್ರಾಫಿಕ್ ಪೊಲೀಸ್ ಆದ ಸಚಿವ: ನಿಮಿಷದಲ್ಲೇ ಕ್ಲಿಯರ್ ಆಯ್ತು ಟ್ರಾಫಿಕ್, ವಿಡಿಯೋ ವೈರಲ್

Published : Sep 11, 2019, 04:30 PM IST
ಟ್ರಾಫಿಕ್ ಪೊಲೀಸ್ ಆದ ಸಚಿವ: ನಿಮಿಷದಲ್ಲೇ ಕ್ಲಿಯರ್ ಆಯ್ತು ಟ್ರಾಫಿಕ್, ವಿಡಿಯೋ ವೈರಲ್

ಸಾರಾಂಶ

ಟ್ರಾಫಿಕ್ ಸಿಗ್ನಲ್ ಕೆಟ್ಟು ಫುಲ್ ಜಾಮ್| ಟ್ರಾಫಿಕ್ ನಿಯಂತ್ರಿಸಲು ಹರ ಸಾಹಸ ಪಡುತ್ತಿದ್ದ ಪೊಲೀಸರ ಸಹಾಯಕ್ಕೆ ಧಾವಿಸಿದ ಸಚಿವ| ನೋಡ ನೋಡುತ್ತಿದ್ದಂತೆಯೇ ಕ್ಲಿಯರ್ ಆಯ್ತು ಟ್ರಾಫಿಕ್| ಸಚಿವರ ನಡೆಗೆ ಯುವಕರು ಫುಲ್ ಖುಷ್

ಭೋಪಾಲ್[ಸೆ.11]: ಮಧ್ಯಪ್ರದೇಶದ ಕ್ರೀಡಾ ಸಚಿವ ಜೀತೂ ಪಟ್ವಾರಿ ಬುಧವಾರದಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸೌಂಡ್ ಮಾಡಿದ್ದಾರೆ. ಕಮಲನಾಥ್ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿರುವ ಜೀತೂ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ಇದರಲ್ಲಿ ಅವರು ಟ್ರಾಫಿಕ್ ನಿಯಂತ್ರಿಸುತ್ತಿರುವುದನ್ನು ನೋಡಬಹುದಾಗಿದೆ. 

ಹೌದು ಕ್ರೀಡಾ ಸಚಿವ ಜೀತೂ ಪಟ್ವಾರಿ ಇಂದೋರ್ ನಲ್ಲಿ ಖುದ್ದು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದರು. ಬಹಳ ಸಮಯ ಕಾದರೂ ವಾಹನ ಚಲಿಸದಿರುವುದನ್ನು ಗಮನಿಸಿದ ಸಚಿವರು ತಾವೇ ಗಾಡಿಯಿಂದಿಳಿದು ಟ್ರಾಫಿಕ್ ಪೊಲೀಸರಂತೆ, ಟ್ರಾಫಿಕ್ ಕ್ಲಿಯರ್ ಮಾಡಿಸಿದ್ದಾರೆ. ಸಚಿವರ ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದು, ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

ಮಂಗಳವಾರ ಸಂಜೆ ನಡೆದ ಘಟನೆ

ಈ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಸುದ್ದಿ ಸಂಸ್ಥೆ ANI ವಿಡಿಯೋವನ್ನು ಶೇರ್ ಮಾಡಿಕೊಂಡಿದೆ. ಇನ್ನು ಖುದ್ದು ಸಚಿವರೇ ಟ್ರಾಫಿಕ್ ಕ್ಲಿಯರ್ ಮಾಡಿಸುತ್ತಿರುವುದನ್ನು ಗಮನಿಸಿದ ಸಾರ್ವಜನಿಕರೂ ಅಚ್ಚರಿಗೀಡಾಗಿದ್ದಾರೆ. ಮತ್ತೆ ಕೆಲವರು ತಾವೂ ಸಚಿವರ ಸಹಾಯಕ್ಕೆ ಧಾವಿಸಿ ಟ್ರಾಫಿಕ್ ಕ್ಲಿಯರ್ ಆಗಲು ಸಹಕರಿಸಿದ್ದಾರೆನ್ನಲಾಗಿದೆ.

ಇನ್ನು ಘಟನೆ ನಡೆದಾಗ ಟ್ರಾಫಿಕ್ ಸಿಗ್ನಲ್ ನೀಡುವ ದೀಪಗಳೂ ಕೆಟ್ಟಿದ್ದವು. ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದುದರಿಂದ ಪೊಲೀಸರೂ ಟ್ರಾಫಿಕ್ ಕಂಟ್ರೋಲ್ ಮಾಡಲು ಕಷ್ಟಪಡುತ್ತಿದ್ದರು. ಹೀಗಾಗಿ ಸಚಿವರು ತಾವೇ ಈ ಕೆಲಸಕ್ಕೆ ಮುಂದಾಗಿದ್ದಾರೆ.

ಹೆಲ್ಮೆಟ್ ಧರಿಸಿದ ಬೈಕ್ ಚಾಲಕರಿಗೆ ಫುಲ್ ಕ್ಲಾಸ್

ಟ್ರಾಫಿಕ್ ನಿಯಂತ್ರಿಸುತ್ತಿದ್ದ ಜೀತೂ ಪಟ್ವಾರಿ ಹೆಲ್ಮೆಟ್ ಧರಿಸದೆ ನಿಯಮ ಉಲ್ಲಂಘಿಸಿದ ಬೈಕ್ ಸವಾರರಿಗೂ ಸಚಿವರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಒಟ್ಟಾರೆಯಾಗಿ ಸಚಿವರ ಈ ಸರಳತೆ ಹಾಗೂ ದಿಟ್ಟ ನಡೆ ಯುವಕರ ಮೆಚ್ಚುಗೆಗೆ ಪಾತ್ರವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
ರೈತರಿಗೆ ಅನುಕೂಲ ಮಾಡುವುದೇ ಗುರಿ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್