
ಚಿತ್ರದುರ್ಗ(ಜ.18): ಕಸಾಯಿಖಾನೆ ಸಾಗಿಸಲಾಗುತ್ತಿದೆ ಎನ್ನಲಾದ ಜಾನುವಾರುಗಳನ್ನು ಸಂಸದ ಪ್ರತಾಪ್ ಸಿಂಹ ರಕ್ಷಿಸಿದ ಘಟನೆ ಚೆಳ್ಳೆಕೆರೆ ಸಮೀಪದ ಇಟೋಬನದಹಳ್ಳಿಯ ಬಳಿ ನಡೆದಿದೆ.
ಸಂಸದ ಪ್ರತಾಪ್ ಸಿಂಹ ಅವರು ಕುಷ್ಟಗಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದಾಗ ಸಮೀಪದ ಡಾಬಾ ಬಳಿ ಕ್ಯಾಂಟರ್ ವಾಹನದ ಮೂಲಕ ಕಳ್ಳತನದಿಂದ ಜಾನುವಾರುಗಳನ್ನು ಸಾಗಿಸಲಾಗುತ್ತಿರುವುದನ್ನು ಗಮನಿಸಿದ್ದಾರೆ. ಸ್ವತಃ ತಪಾಸಣೆ ನಡೆಸಿ ಚೆಳ್ಳಕೆರೆ ಡಿವೈಎಸ್ಪಿಗೆ ಕರೆ ಮಾಡಿ ವಿಷಯ ತಿಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
12 ಎತ್ತು, 3 ಎಮ್ಮೆ ಗಳನ್ನು ರಕ್ಷಿಸಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಫೇಸ್'ಬುಕ್ ಲೈವ್ ಕೂಡ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.