ರಸ್ತೆ ತೆರವುಗೊಳಿಸಲು ಖುದ್ದು ಫೀಲ್ಡಿಗಿಳಿದ ಸಂಸದ ಪ್ರತಾಪ್ ಸಿಂಹ

Published : Aug 21, 2018, 11:26 AM ISTUpdated : Sep 09, 2018, 09:31 PM IST
ರಸ್ತೆ ತೆರವುಗೊಳಿಸಲು ಖುದ್ದು ಫೀಲ್ಡಿಗಿಳಿದ ಸಂಸದ ಪ್ರತಾಪ್ ಸಿಂಹ

ಸಾರಾಂಶ

’ದಕ್ಷಿಣ ಕಾಶ್ಮೀರ’ ಎಂದೇ ಖ್ಯಾತವಾಗಿರುವ ಕೊಡಗು ಈಗ ಅಕ್ಷರಶಃ ಸ್ಮಶಾನದಂತಾಗಿದೆ. ಇಲ್ಲಿನ ಜನರು ಮನೆ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಆ ಭಾಗದಲ್ಲೇ ಇದ್ದು ಸಂತ್ರಸ್ತರ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ. ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಜನರಿಗೆ ಸ್ಪಂದಿಸುತ್ತಿದ್ದಾರೆ.   

ಕೊಡಗು (ಆ. 21): ’ದಕ್ಷಿಣ ಕಾಶ್ಮೀರ’ ಎಂದೇ ಖ್ಯಾತವಾಗಿರುವ ಕೊಡಗು ಈಗ ಅಕ್ಷರಶಃ ಸ್ಮಶಾನದಂತಾಗಿದೆ. ಇಲ್ಲಿನ ಜನರು ಮನೆ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಆ ಭಾಗದಲ್ಲೇ ಇದ್ದು ಸಂತ್ರಸ್ತ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ. ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಜನರಿಗೆ ಸ್ಪಂದಿಸುತ್ತಿದ್ದಾರೆ. 

ಸೋಮವಾರ ಪೇಟೆ ತಾಲ್ಲೂಕಿನ ಮಾದಾಪುರ , ಹಟ್ಟಿಹೊಳೆ ಮತ್ತು  ಮುಕ್ಕೋಡ್ಲು ವಿನಲ್ಲಿ ಭಾರಿ ಮಳೆಯಿಂದಾಗಿ ಸೇತುವೆ ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಅಲ್ಲಿದೆ ಖುದ್ದು ಪ್ರತಾಪ್ ಸಿಂಹ ಭೇಟಿ ನೀಡಿ ಸಾರ್ವಜನಿಕರ ಜೊತೆ ಸೇರಿ ಕಾರ್ಯಾಚರಣೆಗೆ ಕೈ ಜೋಡಿಸಿದರು. ಪ್ರತಾಪ್ ಸಿಂಹರ ಈ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. 

 

 

ಸುಂಟಿಕೊಪ್ಪ ಹಾಗೂ ಮಾದಾಪುರದಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಸಂತ್ರಸ್ತರ ಯೋಗ ಕ್ಷೇಮ ವಿಚಾರಿಸಲಾಯಿತು ಹಾಗೂ ಅಗತ್ಯ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಯಿತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್