ಬೆಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

Published : Mar 31, 2017, 03:12 PM ISTUpdated : Apr 11, 2018, 12:49 PM IST
ಬೆಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

ಸಾರಾಂಶ

ಪ್ರಭಾ ಬೆಳವಂಗಲ ಎಂಬವರ ವಿರುದ್ಧ ದೂರು ನೀಡಿದ್ದರೂ ಇದುವರೆಗೆ ಪೊಲೀಸರು FIR​ ದಾಖಲಿಸಿಲ್ಲ, ದೂರು ಕೊಟ್ಟು ಹತ್ತು ದಿನ ಕಳೆದರೂ ಪೊಲೀಸ್​ ಆಯುಕ್ತರು ಮಾಹಿತಿ ನೀಡುತ್ತಿಲ್ಲವೆಂದು ಪ್ರತಾಪ್ ಸಿಂಹ ಬೆಂಗಳೂರು ಪೊಲೀಸ್​ ಆಯುಕ್ತ ಪ್ರವೀಣ್​ಸೂದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮಾ.31): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ಫೇಸ್​'ಬುಕ್​ನಲ್ಲಿ ಅವಹೇಳನಕಾರಿಯಾಗಿ ಬರೆದಿದ್ದವರ ವಿರುದ್ಧ ಎಫ್'ಐಆರ್ ದಾಖಲಿಸದ ಬೆಂಗಳೂರು ಪೊಲೀಸರ ವಿರುದ್ಧ ಬಿಜೆಪಿ ಸಂಸದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಭಾ ಬೆಳವಂಗಲ ಎಂಬವರ ವಿರುದ್ಧ ದೂರು ನೀಡಿದ್ದರೂ ಇದುವರೆಗೆ ಪೊಲೀಸರು FIR​ ದಾಖಲಿಸಿಲ್ಲ, ದೂರು ಕೊಟ್ಟು ಹತ್ತು ದಿನ ಕಳೆದರೂ ಪೊಲೀಸ್​ ಆಯುಕ್ತರು ಮಾಹಿತಿ ನೀಡುತ್ತಿಲ್ಲವೆಂದು ಪ್ರತಾಪ್ ಸಿಂಹ ಬೆಂಗಳೂರು ಪೊಲೀಸ್​ ಆಯುಕ್ತ ಪ್ರವೀಣ್​ಸೂದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೂರು ಕೊಟ್ಟವರಿಗೆ ತನಿಖೆ ವಿಚಾರ ತಿಳಿದುಕೊಳ್ಳುವ ಹಕ್ಕು ಇರುತ್ತದೆ, ಆದರೆ ಪ್ರವೀಣ್​ ಸೂದ್​ ಅವರು ತನಿಖೆ ಪ್ರಗತಿ ಬಗ್ಗೆ ಮಾಹಿತಿ ನೀಡುತ್ತಿಲ್ಲ, ಕರೆ​ ಮಾಡಿದರೆ ಪ್ರವೀಣ್​ ಸೂದ್​ ಪೋನ್​ ಸ್ವೀಕರಿಸುತ್ತಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಒಬ್ಬ ಸಂಸದನಿಗೆ ಪ್ರತಿಕ್ರಿಯಿಸುವುದಿಲ್ಲ ಎಂದರೆ ಅರ್ಥ ಏನು? ಸಂಸದರಿಗೆ ಸ್ಪಂದನೆ ಇಲ್ಲ ಅಂದರೆ ಜನಸಾಮಾನ್ಯರಿಗೆ ಸ್ಪಂದಿಸುತ್ತಾರಾ? ಪೊಲೀಸ್​ ಕಂಟ್ರೋಲ್​ ರೂಂ ಅಸ್ವಸ್ಥವಾಗಿದೆ ಎಂದು 108 ಗೆ ಪೋನ್​ ಮಾಡಬೇಕಾ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ರಮಕ್ಕೆ ಅವಕಾಶವೇ ಇಲ್ಲ! ಕೆಇಎ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು: ಹೇಗಿದೆ ಗೊತ್ತಾ ಇಂದಿನ ಸಿದ್ಧತೆ?
ಬೆಂಗಳೂರು : ನಗರದ 35 ರಸ್ತೆಗಳಲ್ಲಿ ಇನ್ನು ಪೇ ಆ್ಯಂಡ್‌ ಪಾರ್ಕ್‌