
ಬೆಂಗಳೂರು (ಅ.25): ವಜ್ರ ಮಹೋತ್ಸವದಲ್ಲಿ ಟಿಪ್ಪು ಸುಲ್ತಾನನನ್ನು ಶ್ಲಾಘಿಸಿದ ರಾಷ್ಟ್ರಪತಿಯವರಿಗೆ ಸಂಸದ ಪ್ರತಾಪ್ ಸಿಂಹ ಟ್ವಿಟರ್'ನಲ್ಲಿ ಪ್ರಶ್ನೆ ಕೇಳಿದ್ದಾರೆ.
ಗೌರವಾನ್ವಿತ ರಾಷ್ಟ್ರಪತಿಗಳೇ, ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಪ್ರರ್ವತಕರಾಗಿದ್ದರೆ 3 ಮತ್ತು 4 ನೇ ಆಂಗ್ಲೋ-ಇಂಡಿಯನ್ ಯುದ್ದ ಯಾಕೆ ಸೋತರು? ಕ್ಷಿಪಣಿಗಳನ್ನೇಕೆ ಆ ಸಮಯದಲ್ಲಿ ಬಳಸಲಿಲ್ಲ? ಎಂದು ಟ್ವಿಟರ್ನಲ್ಲಿ ರಾಷ್ಟ್ರಪತಿಗಳಿಗೆ ಪ್ರಶ್ನೆ ಹಾಕಿದ್ದಾರೆ.
ರಾಷ್ಟ್ರಪತಿಯವರು ಟಿಪ್ಪು ಹಿರೋ ಆಗಿ ವೀರ ಮರಣ ಹೊಂದಿದ ಎಂದಿದ್ದಾರೆ. ಸರ್, ಹೀರೋಗಳು ಯುದ್ದಭೂಮಿಯಲ್ಲಿ ಹೋರಾಟ ಮಾಡಿ ಸಾಯುತ್ತಾರೆ. ಆದರೆ ಟಿಪ್ಪು ತನ್ನ ಕೋಟೆಯೊಳಗೆ ಯುದ್ದವನ್ನೇ ಮಾಡದೆ ಮರಣಹೊಂದಿದ್ದಾನೆ ಎಂದು ಸಂಸದ ಪ್ರತಾಪ್ ಸಿಂಹ ಟ್ವಿಟರ್'ನಲ್ಲಿ ರಾಷ್ಟ್ರಪತಿಯವರಿಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.