ಚುನಾವಣೆ ಮುಗಿದರೂ ರಿಲ್ಯಾಕ್ಸ್ ಮಾಡದ ಪ್ರತಾಪಸಿಂಹ..!

Published : Apr 25, 2019, 10:39 AM IST
ಚುನಾವಣೆ ಮುಗಿದರೂ ರಿಲ್ಯಾಕ್ಸ್ ಮಾಡದ ಪ್ರತಾಪಸಿಂಹ..!

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳೆಲ್ಲಾ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಆದರೆ ಸಂಸದ ಪ್ರತಾಪ್ ಸಿಂಹ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ಮೈಸೂರು : ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದೇ ವೇಳೆ ಸಂಸದರ ಪ್ರತಾಪ್ ಸಿಂಹ ಮಳೆ ಅನಾಹುತದಿಂದ ತತ್ತರಿಸಿದ ಪ್ರದೇಶಗಳಿಗೆ ತೆರಳಿ ಜನರ ಸಹಾಯಕ್ಕೆ ನಿಂತಿದ್ದಾರೆ. 

ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳದೆ ಜನರ ಸಂಕಷ್ಟಕ್ಕೆ ಸ್ಪಂದಿಸಿ ಔದಾರ್ಯ ಮೆರೆಯುತ್ತಿದ್ದಾರೆ. 

ಮೈಸೂರಿನ ಹುಣಸೂರು, ಪಿರಿಯಾಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ವೃದ್ಧೆಯೋರ್ವರು ಬಲಿಯಾಗಿದ್ದು, ಹಲವಾರು ಮನೆಗಳ ಛಾವಣಿ ಹಾರಿವೆ.

ಅನಾಹುತದಿಂದ ತತ್ತರಿಸಿದ ಮನೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇದೇ ವೇಳೆ ಸ್ಥಳೀಯ ತಹಶೀಲ್ದಾರ್ ಗಮನಕ್ಕೆ ತಂದು ರಾಷ್ಟ್ರೀಯ ವಿಪತ್ತು ಪರಿಹಾರ ‌ನಿಧಿಯಿಂದ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಚುನಾವಣೆ ಮುಗಿದರೂ ಕೂಡ ರಿಲ್ಯಾಕ್ಸ್ ಮಾಡದೇ ತೊಂದರೆಗೊಳಗಾದ ಜನರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದ್ದಕ್ಕೆ ಸ್ಥಳೀಯರಿಂದ ಶ್ಲಾಘನೆ ವ್ಯಕ್ತವಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!