
ನವದೆಹಲಿ[ಅ.19]: ಹವಮಾನ ವೈಪರಿತ್ಯದಿಂದ ಹೆಲಿಕ್ಯಾಪ್ಟನ್ ಟೇಕ್ ಆಫ್’ಗೆ ಅಡಚಣೆಯಾದ್ದರಿಂದ ಸಂಸದ ರಾಹುಲ್ ಗಾಂಧಿ ಕೆಲಕಾಲ ಮಕ್ಕಳೊಂದಿಗೆ ಕ್ರಿಕೆಟ್ ಆಡಿ ಕಾಲ ಕಳೆದರು.
ಕಾಂಗ್ರೆಸ್ ಪ್ರಣಾಳಿಕೆ ಕದ್ದೊಯ್ಯಿರಿ: ಪ್ರಧಾನಿ ಮೋದಿಗೆ ರಾಹುಲ್ ಆಮಂತ್ರಣ!
ಹರ್ಯಾಣದ ಮಹೇಂದ್ರಘಢದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ರೆವಾರಿ ಎಂಬಲಿಂದ ತೆರಳಬೇಕಿತ್ತು. ಹವಾಮಾನ ಕೈಕೊಟ್ಟಿದ್ದರಿಂದ ರಾಹುಲ್ ಗಾಂಧಿ ಅಲ್ಲೇ ಕೆಲಕಾಲ ಉಳಿಯಬೇಕಾಯಿತು. ಈ ವೇಳೆ ಮಕ್ಕಳ ಜತೆ ಕ್ರಿಕೆಟ್ ಆಡಿ ಸಂಭ್ರಮಿಸಿದರು.
ಚಾಮುಂಡೇಶ್ವರಿ ಸೋಲು: ಚುನಾವಣೆಯಲ್ಲಿ ನಾಯಕರ ಸುಳ್ಳು ಮಾಹಿತಿ ಬಿಚ್ಚಿಟ್ಟ ಸಿದ್ದು
ಈ ಬಗ್ಗೆ ಆಲ್ ಇಂಡಿಯಾ ಮಹಿಳಾ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿಯವರು ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು. ಆ ಬಳಿಕ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕ್ಯಾಪ್ಟನ್ ಟೇಕ್ ಆಫ್ ಆಗಲಿಲ್ಲ. ಈ ವೇಳೆ ರೆವಾರಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದರು ಎಂದು ಟ್ವೀಟ್ ಮಾಡಿದೆ.
ರಾಹುಲ್ ಚೆನ್ನಾಗಿಯೇ ಬ್ಯಾಟ್ ಬೀಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.