ಕೇರಳ ಪ್ರವಾಹ ಸಂತ್ರಸ್ತರಿಗೆ ರಾಜೀವ್ ಚಂದ್ರಶೇಖರ್ 25 ಲಕ್ಷ ರು. ನೆರವು

Published : Aug 13, 2018, 03:49 PM ISTUpdated : Sep 09, 2018, 10:06 PM IST
ಕೇರಳ ಪ್ರವಾಹ ಸಂತ್ರಸ್ತರಿಗೆ ರಾಜೀವ್ ಚಂದ್ರಶೇಖರ್ 25 ಲಕ್ಷ ರು. ನೆರವು

ಸಾರಾಂಶ

ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಪ್ರವಾ ಸಂತ್ರಸ್ತರಿಗಾಗಿ ಏಷ್ಯಾನೆಟ್ ನ್ಯೂಸ್ ವತಿಯಿಂದ ಸಂಗ್ರಹಿಸುತ್ತಿರುವ ಪರಿಹಾರ ನಿಧಿಗೆ 25 ಲಕ್ಷ ರು. ವೈಯಕ್ತಿಕವಾಗಿ ಸಂಸದ ರಾಜೀವ್ ಚಂದ್ರಶೇಖರ್ ನೆರವು ನೀಡಿದ್ದಾರೆ. 

ಬೆಂಗಳೂರು: ಭಾರಿ ಪ್ರವಾಹಕ್ಕೆ ಸಿಲುಕಿ ತತ್ತರಿಸಿರುವ ಕೇರಳದ ಪ್ರವಾಹ ಸಂತ್ರಸ್ತರಿಗೆ ಸಹಾಯಹಸ್ತ ಚಾಚುವಂತೆ ರಾಜ್ಯಸಭಾ ಸದಸ್ಯ ರಾಜೀವ್‌ಚಂದ್ರ ಶೇಖರ್ ಕರೆ ನೀಡಿದ್ದಾರೆ.

ಅಲ್ಲದೆ, ಸಂತ್ರಸ್ತರಿಗಾಗಿ ಏಷ್ಯಾನೆಟ್ ನ್ಯೂಸ್ ವತಿಯಿಂದ ಸಂಗ್ರಹಿಸುತ್ತಿರುವ ಪರಿಹಾರ ನಿಧಿಗೆ 25 ಲಕ್ಷ ರು. ವೈಯಕ್ತಿಕ ಸಹಾಯ ನೀಡಿದ್ದಾರೆ. ಕೇರಳದಲ್ಲಿ ಭಾರಿ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸಂತ್ರಸ್ತರ ನೆರವಿಗೆ ಪ್ರತಿಯೊಬ್ಬರೂ ಧಾವಿಸಬೇಕಿದೆ. ಪ್ರಧಾನಮಂತ್ರಿ ಪರಿಹಾರ ನಿಧಿ ಅಥವಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಹಾಯ ನೀಡುವ ಮೂಲಕ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದ್ದಾರೆ.

 

 

ಈ ಬಗ್ಗೆ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾಗೂ ಜೀವ ಹಾನಿ ಉಂಟಾಗಿದೆ. ಇಂತಹ ಅಸಹಾಯಕ ಸ್ಥಿತಿಯಲ್ಲಿರುವ ಸಂತ್ರಸ್ತರಿಗೆ ನೆರವು ನೀಡಿ. ಏಷ್ಯಾನೆಟ್ ನ್ಯೂಸ್‌ನಿಂದ ಸಂಗ್ರಹಿಸುತ್ತಿರುವ ಪರಿಹಾರ ನಿಧಿಗೆ ೨೫ ಲಕ್ಷ ರು. ನೆರವು ನೀಡಿದ್ದೇನೆ. ಎಲ್ಲರೂ ಪ್ರಧಾನಮಂತ್ರಿ ಅಥವಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೆರವು ನೀಡುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು