
ಬೆಂಗಳೂರು[ಸೆ.20]: ರಾಜ್ಯದ ಜನರನ್ನು ದಂಗೆಯೇಳಿಸುವುದು ನಮಗೆ ಗೊತ್ತು ಎಂಬ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಆಕ್ರೊಶ ವ್ಯಕ್ತಪಡಿಸಿದ್ದಾರೆ.
ಮಾನ್ಯ ಹೆಚ್. ಡಿ. ಕುಮಾರ ಸ್ವಾಮಿ ಅವರೆ, ಕರ್ನಾಟಕದ ಮುಖ್ಯಮಂತ್ರಿಯಾಗಿ ನೀವು ಕರ್ನಾಟಕದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಸಂವಿಧಾನವನ್ನು ಎತ್ತಿಹಿಡಿಯುವ ಜವಾಬ್ದಾರಿಯನ್ನು ಮರೆತು ನೀವು ನೇರವಾಗಿ ಗಲಭೆಗೆ ಪ್ರಚೋದನೆ ನೀಡಿ ನಿಮ್ಮ ಕರ್ತವ್ಯವನ್ನು ಉಲ್ಲಂಘಿಸುತ್ತಿದ್ದೀರಿ ’ ಎಂದು ಟ್ವಿಟರ್'ನಲ್ಲಿ ಕಿಡಿಕಾರಿದ್ದಾರೆ.
ಬಿಜೆಪಿ ನಾಳೆ ಧರಣಿ
ಸಿಎಂ ದಂಗೆ ಹೇಳಿಕೆ ವಿರೋಧಿಸಿ ನಾಳೆ ಬಿಜೆಪಿ ಯುವ ಮೋರ್ಚಾ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ರಾಜ್ಯ ಬಿಜೆಪಿ ನಾಯಕರು ಈ ಹೇಳಿಕೆಯ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲು ಚಿಂತನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.