ಬೆಂಗಳೂರಿನ ಕೆರೆಗಳನ್ನು ಉಳಿಸಿ ಅಭಿಯಾನ: ಬೆಳ್ಳಂದೂರು ಕೆರೆಗೆ ಸಂಸದ ರಾಜೀವ್ ಚಂದ್ರಶೇಖರ್ ಭೇಟಿ

Published : Apr 28, 2017, 05:28 AM ISTUpdated : Apr 11, 2018, 12:51 PM IST
ಬೆಂಗಳೂರಿನ ಕೆರೆಗಳನ್ನು ಉಳಿಸಿ ಅಭಿಯಾನ: ಬೆಳ್ಳಂದೂರು ಕೆರೆಗೆ ಸಂಸದ ರಾಜೀವ್ ಚಂದ್ರಶೇಖರ್ ಭೇಟಿ

ಸಾರಾಂಶ

ಬೆಂಗಳೂರಿನ ಕೆರೆ ಉಳಿಸುವಂತೆ NGT ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಸಭಾ ಸದಸ್ಯ ರಾಜೀವ್​ ಚಂದ್ರಶೇಖರ್​ ಬೆಳ್ಳಂದೂರು ಕೆರೆಗೆ ಭೇಟಿ ನೀಡಿದ್ದರು.

ಬೆಂಗಳೂರು(ಎ.28): ಬೆಂಗಳೂರಿನ ಕೆರೆ ಉಳಿಸುವಂತೆ NGT ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಸಭಾ ಸದಸ್ಯ ರಾಜೀವ್​ ಚಂದ್ರಶೇಖರ್​ ಬೆಳ್ಳಂದೂರು ಕೆರೆಗೆ ಭೇಟಿ ನೀಡಿದ್ದರು.

ಬೆಳಂದೂರು, ವರ್ತೂರು ಮತ್ತು ರಾಂಪುರ ಕೆರೆಗಳಿಗೆ ಸಂಸದರು ಭೇಟಿ ನೀಡಿದ್ದರು. ಭವಿಷ್ಯದ ದೃಷ್ಟಿಯಿಂದ ಪ್ರಾಚೀನ ಬೆಂಗಳೂರನ್ನು ಮುಂದಿನ ಪೀಳಿಗೆಗೆ ಉಳಿಸಲು ಕೆರೆ ಉಳಿಸಿ ಅಭಿಯಾನದ ಮೂಲದ ರಾಜ್ಯಸಭಾ ಸದಸ್ಯ ರಾಜೀವ್​ ಚಂದ್ರಶೇಖರ್ ಕೆರೆ ಉಳಿವಿಗೆ ಪಣ ತೊಟ್ಟಿದ್ದಾರೆ. ಸಂಸದ ಪಿ.ಸಿ ಮೋಹನ್​, ಮಾಜಿ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬೆಂಗಳೂರು ನಾಗರಿಕ ವೇದಿಕೆ ಸದಸ್ಯರು ಈ ವೇಳೆ ಹಾಜರಿದ್ದರು.

ಈ ವೇಳೆ ಕೆರೆಯಲ್ಲಿ ಈಗಲೂ ಕೂಡಾ ರಾಸಾಯನಿಕ ನೀರು, ತ್ಯಾಜ್ಯ ಹಾಕಲಾಗುತ್ತಿದೆ. ಆದರೆ ಅಧಿಕಾರಿಗಳು ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಂತ ಸ್ಥಳೀಯರು ಸಂಸದರ ಮುಂದೆ ಅಳಲು ತೋಡಿಕೊಂಡರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!