ಬೆಂಗಳೂರಿನ ಕೆರೆಗಳನ್ನು ಉಳಿಸಿ ಅಭಿಯಾನ: ಬೆಳ್ಳಂದೂರು ಕೆರೆಗೆ ಸಂಸದ ರಾಜೀವ್ ಚಂದ್ರಶೇಖರ್ ಭೇಟಿ

By Suvarna Web DeskFirst Published Apr 28, 2017, 5:28 AM IST
Highlights

ಬೆಂಗಳೂರಿನ ಕೆರೆ ಉಳಿಸುವಂತೆ NGT ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಸಭಾ ಸದಸ್ಯ ರಾಜೀವ್​ ಚಂದ್ರಶೇಖರ್​ ಬೆಳ್ಳಂದೂರು ಕೆರೆಗೆ ಭೇಟಿ ನೀಡಿದ್ದರು.

ಬೆಂಗಳೂರು(ಎ.28): ಬೆಂಗಳೂರಿನ ಕೆರೆ ಉಳಿಸುವಂತೆ NGT ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಸಭಾ ಸದಸ್ಯ ರಾಜೀವ್​ ಚಂದ್ರಶೇಖರ್​ ಬೆಳ್ಳಂದೂರು ಕೆರೆಗೆ ಭೇಟಿ ನೀಡಿದ್ದರು.

ಬೆಳಂದೂರು, ವರ್ತೂರು ಮತ್ತು ರಾಂಪುರ ಕೆರೆಗಳಿಗೆ ಸಂಸದರು ಭೇಟಿ ನೀಡಿದ್ದರು. ಭವಿಷ್ಯದ ದೃಷ್ಟಿಯಿಂದ ಪ್ರಾಚೀನ ಬೆಂಗಳೂರನ್ನು ಮುಂದಿನ ಪೀಳಿಗೆಗೆ ಉಳಿಸಲು ಕೆರೆ ಉಳಿಸಿ ಅಭಿಯಾನದ ಮೂಲದ ರಾಜ್ಯಸಭಾ ಸದಸ್ಯ ರಾಜೀವ್​ ಚಂದ್ರಶೇಖರ್ ಕೆರೆ ಉಳಿವಿಗೆ ಪಣ ತೊಟ್ಟಿದ್ದಾರೆ. ಸಂಸದ ಪಿ.ಸಿ ಮೋಹನ್​, ಮಾಜಿ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬೆಂಗಳೂರು ನಾಗರಿಕ ವೇದಿಕೆ ಸದಸ್ಯರು ಈ ವೇಳೆ ಹಾಜರಿದ್ದರು.

ಈ ವೇಳೆ ಕೆರೆಯಲ್ಲಿ ಈಗಲೂ ಕೂಡಾ ರಾಸಾಯನಿಕ ನೀರು, ತ್ಯಾಜ್ಯ ಹಾಕಲಾಗುತ್ತಿದೆ. ಆದರೆ ಅಧಿಕಾರಿಗಳು ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಂತ ಸ್ಥಳೀಯರು ಸಂಸದರ ಮುಂದೆ ಅಳಲು ತೋಡಿಕೊಂಡರು.

 

click me!