
ಬೆಂಗಳೂರು : ಕಾಂಗ್ರೆಸ್ನ ಹಾಲಿ ಸಂಸದರ ಪೈಕಿ ಇಡೀ ದೇಶದಲ್ಲೇ ಟಿಕೆಟ್ ವಂಚಿತರಾದ ಏಕೈಕ ಸಂಸದ ಮುದ್ದಹನುಮೇ ಗೌಡ ಅವರು ಗುರುವಾರ ಮಧ್ಯಾಹ್ನ 12 ಗಂಟೆಗೆ ಧರ್ಮ ಸ್ಥಳದಲ್ಲಿ ತಮ್ಮ ಮುಂದಿನ ರಾಜಕೀಯ ನಿರ್ಧಾರವನ್ನು ಪ್ರಕಟಿಸಲು ಸಜ್ಜಾಗಿದ್ದಾರೆ.
ಬುಧವಾರ ಧರ್ಮಸ್ಥಳಕ್ಕೆ ತೆರಳಿದ ಮುದ್ದುಹನುಮೇಗೌಡ ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ಮಂಜುನಾಥಸ್ವಾಮಿಯ ದರ್ಶನ ಪಡೆದ ಬಳಿಕ ಮಹತ್ವದ ಸುದ್ದಿ ಗೋಷ್ಠಿ ನಡೆಸಿ, ಎಂಪಿ ಟಿಕೆಟ್ ಸೇರಿದಂತೆ ಇಲ್ಲಿಯವರೆಗೆ ನಡೆದ ರಾಜಕೀಯ ಬೆಳವಣಿ ಗೆಗಳ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸಿ, ಮುಂದಿನ ರಾಜಕೀಯ ನಡೆಯನ್ನು ತಿಳಿಸಲಿ ದ್ದಾರೆ ಎಂದು ಮುದ್ದಹನುಮೇಗೌಡ ಅವರ ಆಪ್ತ ಮೂಲಗಳು ತಿಳಿಸಿವೆ.
ತುಮಕೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮುದ್ದಹನು ಮೇಗೌಡರಿಗೆ ಟಿಕೆಟ್ ತಪ್ಪಿಸಿ, ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಲಾಗಿತ್ತು. ಇದರಿಂದಾಗಿ ಚುನಾವಣಾ ಪ್ರಚಾರದಿಂದ ದೂರವೇ ಉಳಿದಿದ್ದರು. ಟಿಕೆಟ್ ಕೈತಪ್ಪಿದಾಗ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕಿಳಿದಿದ್ದ ಅವರು ನಾಮಪತ್ರ ಹಿಂಪಡೆಯಲು ಮೂರೂವರೆ ಕೋಟಿ ರು. ಪಡೆದಿದ್ದಾರೆ ಎಂಬ ಆರೋಪ ಕೂಡಾ ಕೇಳಿಬಂದಿತ್ತು.
ನಾಮಪತ್ರ ಹಿಂಪಡೆಯುವ ದಿನದಿಂದ ಇಲ್ಲಿಯವರೆಗೂ ಮೌನವಾ ಗಿಯೇ ಉಳಿದಿ ರುವ ಮುದ್ದಹನುಮೇಗೌಡ, ಗುರುವಾರ ಮೌನ ಮುರಿಯುವ ಸಾಧ್ಯತೆ ಯಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.