ಎಜಿ ಮುಕುಲ್‌ ರೋಹಟಗಿ ದಿಢೀರ್‌ ಪದತ್ಯಾಗ

Published : Jun 12, 2017, 10:17 AM ISTUpdated : Apr 11, 2018, 12:42 PM IST
ಎಜಿ ಮುಕುಲ್‌ ರೋಹಟಗಿ ದಿಢೀರ್‌ ಪದತ್ಯಾಗ

ಸಾರಾಂಶ

ದೇಶದ ಉನ್ನತ ಕಾನೂನು ಅಧಿಕಾರಿ ಹುದ್ದೆಗೆ ಎರಡನೇ ಅವಧಿಗೆ ಮುಂದುವರಿಯಲು ತಮಗೆ ಆಸಕ್ತಿಯಿಲ್ಲ ಎಂಬುದಾಗಿ ಸರ್ಕಾರಕ್ಕೆ ಕಳೆದ ತಿಂಗಳೇ ಪತ್ರ ಬರೆದಿದ್ದೇನೆ ಎಂದು ರೋಹಟಗಿ ಹೇಳಿದ್ದಾರೆ.

ನವದೆಹಲಿ: ಮೂರು ವರ್ಷಗಳು ಪೂರ್ಣಗೊಂಡಿರುವುದರಿಂದ ತಮ್ಮನ್ನು ಅಟಾರ್ನಿ ಜನರಲ್‌ ಹುದ್ದೆ ಯಿಂದ ಕೈಬಿಡುವಂತೆ ಮುಕುಲ್‌ ರೋಹಟಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೇಶದ ಉನ್ನತ ಕಾನೂನು ಅಧಿಕಾರಿ ಹುದ್ದೆಗೆ ಎರಡನೇ ಅವಧಿಗೆ ಮುಂದುವರಿಯಲು ತಮಗೆ ಆಸಕ್ತಿಯಿಲ್ಲ ಎಂಬುದಾಗಿ ಸರ್ಕಾರಕ್ಕೆ ಕಳೆದ ತಿಂಗಳೇ ಪತ್ರ ಬರೆದಿದ್ದೇನೆ ಎಂದು ರೋಹಟಗಿ ಹೇಳಿದ್ದಾರೆ.

ಖಾಸಗಿ ಕಾನೂನು ಸೇವೆಗೆ ಮರಳಲು ಬಯಸಿರುವುದಾಗಿ ಅವರು ತಿಳಿಸಿದ್ದಾರೆ. ಅವರ ಈ ದಿಢೀರ್‌ ನಿರ್ಧಾರ ಸರ್ಕಾರಕ್ಕೆ ಆಘಾತ ತಂದಿದೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರೋಹಟಗಿ ಅವರನ್ನು ಅಟಾರ್ನಿ ಜನರಲ್‌ ಆಗಿ ನೇಮಕಗೊಳಿಸಲಾಗಿತ್ತು. ಇವರ ಸ್ಥಾನಕ್ಕೆ ಖ್ಯಾತ ವಕೀಲ ಹರೀಶ್‌ ಸಾಳ್ವೆ ಮತ್ತು ಸಾಲಿಸಿಟರ್‌ ಜನರಲ್‌ ರಂಜಿತ್‌ ಕುಮಾರ್‌ ಅವರ ಹೆಸರು ಚಾಲ್ತಿಯಲ್ಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾ ಚೆನ್ನಾಗಿಲ್ಲ, ನಾ ಬಿಳಿ ಇಲ್ಲ, ನನ್ನ ಕುರೂಪಿ ಅಂತಾರೆ: ಪುಟ್ಟ ಮಗಳ ಅಳು ಕೇಳಲಾಗದೇ ನೆಟ್ಟಿಗರ ಸಲಹೆ ಕೇಳಿದ ತಾಯಿ
ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಬಂಗಾರಕ್ಕೆ ಕನ್ನ! 85 ಗುಂಡು ಕೊಟ್ಟರೆ 77 ಮಾತ್ರ ವಾಪಸ್