
ಕೋಲ್ಕತ್ತಾ(ಜು.13): ರಾಜ್ಯದಲ್ಲಿ ವೃದ್ಧಿಸುತ್ತಿರುವ ಬಿಜೆಪಿ ಪ್ರಭಾವ ಕಂಡು ಈಗಾಗಲೇ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಂಗಾಲಾಗಿದ್ದಾರೆ. ಈಗಾಗಲೇ ವಿವಿಧ ಪಕ್ಷಗಳ ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದರಿಂದ ಪ.ಬಂಗಾಳದಲ್ಲಿ ಎಲ್ಲರಿಗೂ ಬಿಜೆಪಿ ಎಂದರೆ ಭಯ ಶುರುವಾಗಿದೆ.
ಈ ಮಧ್ಯೆ ಟಿಎಂಸಿ, ಕಾಂಗ್ರೆಸ್, ಸಿಪಿಎಂ ಪಕ್ಷಗಳ ಸುಮಾರು 107 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಮುಕುಲ್ ರಾಯ್ ಹೇಳಿಕೆ ಇಡೀ ಪ.ಬಂಗಾಳವನ್ನು ತಲ್ಲಣಗೊಳಿಸಿದೆ.
ಮೂರು ಪಕ್ಷಗಳ ಒಟ್ಟು 107 ಶಾಸಕರು ಪಕ್ಷಕ್ಕೆ ಶೀರ್ಘದಲ್ಲೇ ಸೇರಲಿದ್ದಾರೆ ಎಂದು ಮುಕುಲ್ ರಾಯ್ ಘೋಷಿಸಿದ್ದಾರೆ. ಅಲ್ಲದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಶಾಸಕರ ಹೆಸರನ್ನೂ ಕೂಡ ಪಟ್ಟಿ ಮಾಡಲಾಗಿದೆ ಎಂದು ರಾಯ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.