ಮುಲಾಯಂ ಬಯಸಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ

Published : Oct 26, 2016, 04:04 AM ISTUpdated : Apr 11, 2018, 01:12 PM IST
ಮುಲಾಯಂ ಬಯಸಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ

ಸಾರಾಂಶ

ನನ್ನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದು ಸಮಾಜವಾದಿ ಪಕ್ಷದ ಅಧ್ಯಕ್ಷರಾದ ನನ್ನ ತಂದೆ ಮುಲಾಯಂ ಸಿಂಗ್ ಯಾದವ್. ಒಂದು ವೇಳೆ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿ ಎಂದು ಹೇಳಿದರೆ ಖಂಡಿತ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅಖಿಲೇಶ್ ತಿಳಿಸಿದ್ದಾರೆ.

ಲಖನೌ(ಅ.26): ಒಂದು ವೇಳೆ ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಸಿದರೂ ನಾನು ಸಮಾಜವಾದಿ ಪಕ್ಷವನ್ನು ತೊರೆಯಲಾರೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನನ್ನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದು ಸಮಾಜವಾದಿ ಪಕ್ಷದ ಅಧ್ಯಕ್ಷರಾದ ನನ್ನ ತಂದೆ ಮುಲಾಯಂ ಸಿಂಗ್ ಯಾದವ್. ಒಂದು ವೇಳೆ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿ ಎಂದು ಹೇಳಿದರೆ ಖಂಡಿತ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅಖಿಲೇಶ್ ತಿಳಿಸಿದ್ದಾರೆ.

ಒಂದು ವೇಳೆ ಪಕ್ಷ ತೊರೆದು ಬೇರೆ ಪಕ್ಷವನ್ನು ಸ್ಥಾಪಿಸುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಖಿಲೇಶ್, ಒಂದು ವೇಳೆ ನಾನು ಪದಚ್ಯುತಿಗೊಂಡರೂ, ನಮ್ಮ ಪಕ್ಷಕ್ಕಾಗಿ ಪ್ರಚಾರ ನಡೆಸುತ್ತೇಯೇ ಹೊರತು ಬೇರೆ ಪಕ್ಷವನ್ನು ಸ್ಥಾಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

2012 ರ ಚುನಾವಣೆಯಲ್ಲಿ ನನ್ನ ಹೆಸರನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದ್ದು ನೆನಪಿರಲಿ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ ಮಾತಿಗೆ ಅಖಲೇಶ್ ಈ ಮೇಲಿನಂತೆ ಉತ್ತರಿಸಿದ್ದಾರೆ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!