
ನವದೆಹಲಿ (ಡಿ. 30): ಸಮಾಜವಾದಿ ಪಕ್ಷದಿಂದ ಉ.ಪ್ರ.ಮುಖ್ಯಮಂತ್ರಿ ಅಖಿಲೇಶ್ ಯಾದವ್, ಹಾಗೂ ಅವರ ಸಹೋದರ ರಾಮ್ ಗೋಪಾಲ್ ಯಾದವ್ ರನ್ನು ಪಕ್ಷದ ವರಿಷ್ಟ ಮುಲಾಯಂ ಸಿಂಗ್ ಯಾದವ್ ಉಚ್ಚಾಟಿಸಿದ್ದಾರೆ.
ಪಕ್ಷವನ್ನು ಉಳಿಸಲು ಅವರಿಬ್ಬರನ್ನು ಉಚ್ಚಾಟಿಸುವುದು ಅಗತ್ಯವೆಂದು ಮುಲಾಯಂ ಸಿಂಗ್ ತಮ್ಮ ನಡೆಗೆ ಸ್ಪಷ್ಟನೆ ನೀಡಿದ್ದಾರೆ. ರಾಮ್ ಗೋಪಾಲ್ ಯಾದವ್ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಶಾಮೀಲಾಗಿದ್ದರು ಜೊತೆಗೆ ಪಕ್ಷವನ್ನು ಇನ್ನಷ್ಟು ದುರ್ಬಲಗೊಳಿಸಿದ್ದಾರೆ. ಎಂದು ಮುಲಾಯಾಂ ಸಿಂಗ್ ಆರೋಪಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರನ್ನು ರಾಮ್ ಗೋಪಾಲ್ ಯಾದವ್ ದಾರಿ ತಪ್ಪಿಸಿದ್ದರು. ಆದರೆ ಅಖಿಲೇಶ್ ಗೆ ರಾಮ್ ಗೋಪಾಲ್ ತನ್ನ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ ಎನ್ನುವುದು ಅರ್ಥವೇ ಆಗಿಲ್ಲವೆಂದು ಮುಲಾಯಂ ಸಿಂಗ್ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.