
ಲಕ್ನೋ(ಡಿ. 30): ಉತ್ತರಪ್ರದೇಶದಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷದೊಳಗೆ ಇಷ್ಟು ದಿನಗಳವರೆಗೆ ನಡೆಯುತ್ತಾ ಬಂದಿದ್ದ ಸಮರ ಇಂದು ತಾರಕಕ್ಕೇರಿದೆ. ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ಪುತ್ರ ಹಾಗೂ ಉ.ಪ್ರ. ಸಿಎಂ ಅಖಿಲೇಶ್ ಯಾದವ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಹೊರಹಾಕಿದ್ದಾರೆ. ಅಖಿಲೇಶ್ ಜೊತೆಗೆ ಮುಲಾಯಂ ಅವರು ತಮ್ಮ ಸೋದರ ರಾಮಗೋಪಾಲ್ ಯಾದವ್ ಅವರನ್ನೂ ಉಚ್ಛಾಟಿಸಿದ್ದಾರೆ. ಪಕ್ಷವನ್ನು ಉಳಿಸಲು ನನಗೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಮುಲಾಯಂ ಸಿಂಗ್ ಯಾದವ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಿದನ್ನೂ ಓದಿ:
ಮುಂಬರುವ ಚುನಾವಣೆಗೆ ಮುಲಾಯಂ ಸಿಂಗ್ ಯಾದವ್ ಅವರು ಅಭ್ಯರ್ಥಿಗಳನ್ನು ಪ್ರಕಟಿಸಿದ್ದರೂ ಅಖಿಲೇಶ್ ಯಾದವ್ ಅವರು ತಮ್ಮದೇ ಪಟ್ಟಿಯನ್ನ ಪ್ರಕಟಿಸಿದ್ದರು. ಇದು ಮುಲಾಯಂ ಸಿಂಗ್ ಅವರನ್ನು ಉದ್ರೇಕಿಸಿತ್ತು. ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಅಖಿಲೇಶ್ ಯಾದವ್ ಅವರ ಸಿಎಂ ಸ್ಥಾನಕ್ಕೆ ಸಂಚಕಾರ ಬಂದಂತಾಗಿದೆ. ಮುಲಾಯಂ ಅವರು ಹೊಸ ಸಿಎಂ ಅಭ್ಯರ್ಥಿಯ ಶೋಧದಲ್ಲಿದ್ದಾರೆ. ಶೀಘ್ರದಲ್ಲೇ ನೂತನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಘೋಷಣೆಯಾಗಲಿದೆ.
ಇದೇ ವೇಳೆ, ಸಮಾಜವಾದಿ ಪಕ್ಷದಿಂದ ಉಚ್ಚಾಟಿತರಾಗಿರುವ ಉ.ಪ್ರ. ಸಿಎಂ ಅಖಿಲೇಶ್ ಯಾದವ್ ತಮ್ಮ ಚಿಕ್ಕಪ್ಪ ರಾಮಗೋಪಾಲ್ ಯಾದವ್ ಅವರೊಂದಿಗೆ ಸೇರಿ ಹೊಸ ಪಕ್ಷ ಸ್ಥಾಪಿಸುವ ಸಂಭಾವ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.