
ಮುಂಬೈ (ಡಿ.15): ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನನಿಲ್ದಾಣವು ಸ್ವಯಂ ಸೇವಾ ತಂತ್ರಜ್ಞಾನವನ್ನು ಪರಿಚಯಿಸಿದ ಭಾರತದ ಮೊದಲ ವಿಮಾನ ನಿಲ್ದಾಣ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ದೇಶದ ಎರಡನೇ ಅತೀ ದೊಡ್ಡ ವಿಮಾನ ನಿಲ್ದಾಣ ಇದಾಗಿದ್ದು ಜನದಟ್ಟನೆ ಹೆಚ್ಚಾಗಿರುವ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಇದನ್ನು ಪರಿಚಯಿಸಲಾಗಿದೆ.
ಏರ್ ಇಂಡಿಯಾ, ಜೆಟ್ ಏರ್ ವೇಸ್, ಸ್ಪೈಸ್ ಜೆಟ್, ಗೋ ಅಂಡ್ ಇಂಡಿಗೋ ಪ್ರಯಾಣಿಕರಿಗೆ ಈ ಸೌಲಭ್ಯ ನೀಡಲಾಗಿದೆ.
ಪ್ರಯಾಣಿಕರ ಲಗೇಜನ್ನು ವೇಗವಾಗಿ ಪರಿಶೀಲಿಸಲು ಸ್ವಯಂ ಸೇವಾ ತಂತ್ರಜ್ಞಾನವನ್ನು (ಸೆಲ್ಫ್ ಬ್ಯಾಗ್ ಡ್ರಾಪ್ ಯೂನಿಟ್) ಅಳವಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.